Advertisement
ಸುದ್ದಿಗಳು

ಭರ್ಜರಿಯಾಗಿ ಬರುತ್ತಿರುವ ಮುಂಗಾರು ಪೂರ್ವ ಮಳೆ | ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ | ಜೂನ್ 6 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶ

Share

ರಾಜ್ಯಾದ್ಯಂತ ಮುಂಗಾರು ಪೂರ್ವ ಮಳೆ(Pre Mansoon rain) ಭರ್ಜರಿಯಾಗಿ ಸುರಿಯುತ್ತಿದೆ. ಕೆಲ ಜಿಲ್ಲಗಳ ನೀರಿನ ಬವಣೆ ತೀರಿದೆ. ಅರಬ್ಬೀ ಸಮುದ್ರದಲ್ಲಿ(Arabian sea) ಮುಂಗಾರು ಮಾರುತಗಳು ಬೀಸುತ್ತಿರುವ ಪರಿಣಾಮ ಮುಂದಿನ ಐದು ದಿನಗಳ ಕಾಲ ಪೂರ್ವ ಮುಂಗಾರು ಮಳೆ ದಕ್ಷಿಣ ಕನ್ನಡ(Dakshina Kannada), ಉಡುಪಿ(Udupi), ಉತ್ತರ ಕನ್ನಡ(Uttara Kannada) ಜಿಲ್ಲೆಗಳಲ್ಲಿ ಸುರಿಯಲಿದೆ. ಇನ್ನು ಜೂನ್ 6 ಅಥವಾ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ(IMD) ಮಾಹಿತಿ ನೀಡಿದೆ.

ಜೊತೆಗೆ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಯೆಲ್ಲೋ ಅಲರ್ಟ್ ಸಹ ಘೋಷಿಸಲಾಗಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 22 ಡಿಗ್ರಿ ಇರಬಹುದು ಎಂದು ಅಂದಾಜಿಸಿದೆ.

“ಸದ್ಯ ಮುಂಗಾರು ಮಾರುತಗಳು ಅರಬ್ಬೀ ಸಮುದ್ರದ ಮಾಲ್ಡೀವ್ಸ್ ಮತ್ತು ಲಕ್ಷದ್ವೀಪದ ಬಳಿ ಬೀಸುತ್ತಿವೆ. ಸದ್ಯ ರಾಜ್ಯದಲ್ಲಿ ಈ ಕಾರಣಕ್ಕೆ ಪೂರ್ವ ಮುಂಗಾರು ಮಳೆ ಮುಂದುವರೆದಿದೆ. ಕೇರಳಕ್ಕೆ ಈ ಮಾರುತಗಳು ಮೇ 28 ರಂದು ಪ್ರವೇಶಿಸುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿಗೆ ಜೂನ್ 6 ಅಥವಾ 7 ರಂದು ಅಪ್ಪಳಿಸಲಿವೆ. ಈಗ ಉಂಟಾಗಿರುವ ಪಶ್ಚಿಮ ಬಂಗಾಳ ಬಳಿಯ ಚಂಡಮಾರುತ ರಾಜ್ಯಕ್ಕೆ ಅಪ್ಪಳಿಸುವುದಿಲ್ಲ” ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ ರಾಜುವೇಲ್ ಮಾಣಿಕ್ಕಂ ಹೇಳಿದ್ದಾರೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದಲ್ಲಿ ಈಗಾಗಲೇ ಪುರ್ವ ಮುಂಗಾರು ಮಳೆ ಆರಂಭವಾಗಿದೆ. ಇನ್ನು ನಿಗದಿಯಂತೆ ಜೂನ್ 6 ಅಥವಾ 7 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

9 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

13 hours ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

14 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

23 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

1 day ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

2 days ago