ಮಲೆನಾಡಲ್ಲಿ ಭಾರೀ ಮಳೆ | ಧಾರಾಕಾರ ಮಳೆಗೆ ತುಂಬಿದ ನದಿ | ಒಮ್ಮೆಲೇ 94 ಮಿಮೀ ಗೂ ಹೆಚ್ಚು ಸುರಿದ ಮಳೆ |

September 7, 2021
9:08 PM

ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಮಂಗಳವಾರ ಒಮ್ಮೆಲೇ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಬೀಳುವ ಕಲ್ಲಾಜೆ ಪ್ರದೇಶದಲ್ಲಿ  94  ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಭಾರೀ ಮಳೆಯ ಕಾರಣದಿಂದ ಹೊಳೆ-ನದಿಗಳು ತುಂಬಿ ಹರಿಯುತ್ತಿದ್ದು ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿತು.

ಮಲೆನಾಡು ಭಾಗಗಳಲ್ಲಿ  ವಿಪರೀತ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಹಾಗೂ ಮುಂಗಾರು ಮಳೆಯ ಪ್ರಭಾವ ಸೇರಿ ಮಲೆನಾಡು ಮಳೆ ನಾಡಾಗಿ ಮಂಗಳವಾರ ಕಂಡಿತು. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಮಳೆ ಪ್ರಭಾವ ಹೆಚ್ಚಾಗಿತ್ತು, ಘಟ್ಟ ಪ್ರದೇಶದಲ್ಲೂ ಮಳೆ ಸುರಿದ ಕಾರಣ ದರ್ಪಣ ತೀರ್ಥ ನದಿಯಲ್ಲಿ  ಹೆಚ್ಚಿನ ನೀರು ಕಂಡುಬಂದಿತ್ತು. ಉಳಿದಂತೆ ಕುಮಾರಧಾರಾ ಸೇರಿದಂತೆ ದಕ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯಿತು. ಮಳೆಯ ಅಬ್ಬರಕ್ಕೆ ಕೃಷಿಕರಿಗೆ ಭಯ ಶುರುವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ವಾಯುಭಾರ ಕುಸಿತದ ಕಾರಣದಿಂದ ಸೆ.10 ರವರೆಗೆ ಇದೇ ರೀತಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇತ್ತು. ಆದರೆ ಸದ್ಯದ ಮಾಹಿತಿಯಂತೆ ಮೋಡಗಳು ಚದುರಲು ಪ್ರಾರಂಭವಾಗಿದ್ದು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror