ಭೀಕರ ಮಳೆ | ಗ್ರಾಮೀಣ ಭಾಗಗಳಾದ ಕೊಲ್ಲಮೊಗ್ರ, ಕಲ್ಮಕಾರು ತತ್ತರ | ಕೊಲ್ಲಮೊಗ್ರದಲ್ಲಿ ಉಕ್ಕಿ ಹರಿದ ನೀರು | ಸೇತುವೆ ಮುಳುಗಡೆ |

August 1, 2022
6:35 PM

ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ ಆರಂಭವಾದ ಮಳೆ ಭೀಕರವಾಗಿ ಸುರಿದಿದೆ. ಇದುವರೆಗೆ 150 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ತಿಳಿಸಿದ್ದಾರೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ.

Advertisement
Advertisement

Advertisement
ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ, ಜಲಸ್ಫೋಟ ಉಂಟಾದರೆ ಇಂದೂ ಕೂಡಾ ಭಾರೀ ಮಳೆಯಾಗುತ್ತಿದೆ. ಸಂಜೆ 4 ಗಂಟೆಗೆ ಆರಂಭವಾದ ಭಾರೀ ಮಳೆ ಸಂಜೆಯವರೆಗೂ ಸುರಿಯುತ್ತಲೇ ಇದೆ. ಕೊಲ್ಲಮೊಗ್ರ -ಕಲ್ಮಕಾರು ರಸ್ತೆ ನಡುವೆ ಕೊಲ್ಲಮೊಗ್ರದ ಬಳಿ ಇರುವ ಸೇತುವೆ ಮುಳುಗಡೆಯಾಗಿದೆ. ಹರಿಹರದಲ್ಲಿಯೂ ಹೊಳೆಯಲ್ಲಿ ನೀರು ತುಂಬಿ ಹರಿಯುತ್ತಿದೆ. ಬಾಳುಗೋಡು ಸಂಪರ್ಕ ರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದೆ.  ಕಲ್ಲಾಜೆಯಲ್ಲಿ ಭಾರೀ ಮಳೆಯಿಂದ ಹೊಳೆ, ತೋಡುಗಳು ತುಂಬಿ ಹರಿದಿದೆ. ಗ್ರಾಮೀಣ ಜನರಿಗೆ ಭಾರೀ ಮಳೆ ಆತಂಕ ತಂದಿದೆ.

Advertisement

 

Advertisement

 

Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ : ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು
April 25, 2024
3:13 PM
by: The Rural Mirror ಸುದ್ದಿಜಾಲ
ಕೊನೆಗೂ ಗಾಂಧಿ ಕುಡಿಗಳ ಕ್ಷೇತ್ರ ಫಿಕ್ಸ್‌ : ರಾಯ್ ಬರೇಲಿಯಿಂದ ಪ್ರಿಯಾಂಕಾ, ಅಮೇಥಿಯಿಂದ ರಾಹುಲ್ ಸ್ಪರ್ಧೆ ಬಹುತೇಕ ಖಚಿತ
April 25, 2024
3:00 PM
by: The Rural Mirror ಸುದ್ದಿಜಾಲ
ಬರಗಾಲ ಎಫೆಕ್ಟ್‌ : ಗಗನಕ್ಕೇರಿದ ತರಕಾರಿ ದರ : ಕ್ಯಾರೆಟ್, ಬೀನ್ಸ್, ಮೆಣಸಿನಕಾಯಿ ಯಾವುದೂ ಮುಟ್ಟುವಂಗಿಲ್ಲ..
April 25, 2024
2:39 PM
by: The Rural Mirror ಸುದ್ದಿಜಾಲ
ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |
April 25, 2024
2:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror