Advertisement
MIRROR FOCUS

ಭೀಕರ ಮಳೆ | ಗ್ರಾಮೀಣ ಭಾಗಗಳಾದ ಕೊಲ್ಲಮೊಗ್ರ, ಕಲ್ಮಕಾರು ತತ್ತರ | ಕೊಲ್ಲಮೊಗ್ರದಲ್ಲಿ ಉಕ್ಕಿ ಹರಿದ ನೀರು | ಸೇತುವೆ ಮುಳುಗಡೆ |

Share

ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಸುಮಾರು ಎರಡು ಗಂಟೆಯಿಂದ ಭೀಕರ ಮಳೆಯಾಗುತ್ತಿದೆ. ಕೊಲ್ಲಮೊಗ್ರ, ಕಲ್ಮಕಾರು, ಕಲ್ಲಾಜೆ, ಹರಿಹರ, ಬಾಳುಗೋಡು ಪ್ರದೇಶದಲ್ಲಿ ಭೀಕರ ಮಳೆಯಾಗುತ್ತಿದೆ. ಕಲ್ಲಾಜೆಯಲ್ಲಿ 4 ಗಂಟೆಯಿಂದ ಆರಂಭವಾದ ಮಳೆ ಭೀಕರವಾಗಿ ಸುರಿದಿದೆ. ಇದುವರೆಗೆ 150 ಮಿಮೀಗಿಂತಲೂ ಅಧಿಕ ಮಳೆ ಸುರಿದಿದೆ ಎಂದು ಕಲ್ಲಾಜೆಯ ಸಿಜೋ ಅಬ್ರಹಾಂ ತಿಳಿಸಿದ್ದಾರೆ. ಭಾರೀ ಮಳೆಗೆ ಹೊಳೆ ನೀರು ಹಕ್ಕಿ ಹರಿದು ಕೊಲ್ಲಮೊಗ್ರ ಹಾಗೂ ಹರಿಹರದಲ್ಲಿ ಸೇತುವೆ ಮುಳುಗಡೆಯಾಗಿದೆ.

ಸುಳ್ಯ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ನಿನ್ನೆ ತಡರಾತ್ರಿ ಕಲ್ಮಕಾರು ಪ್ರದೇಶದಲ್ಲಿ ಭೂಕುಸಿತ, ಜಲಸ್ಫೋಟ ಉಂಟಾದರೆ ಇಂದೂ ಕೂಡಾ ಭಾರೀ ಮಳೆಯಾಗುತ್ತಿದೆ. ಸಂಜೆ 4 ಗಂಟೆಗೆ ಆರಂಭವಾದ ಭಾರೀ ಮಳೆ ಸಂಜೆಯವರೆಗೂ ಸುರಿಯುತ್ತಲೇ ಇದೆ. ಕೊಲ್ಲಮೊಗ್ರ -ಕಲ್ಮಕಾರು ರಸ್ತೆ ನಡುವೆ ಕೊಲ್ಲಮೊಗ್ರದ ಬಳಿ ಇರುವ ಸೇತುವೆ ಮುಳುಗಡೆಯಾಗಿದೆ. ಹರಿಹರದಲ್ಲಿಯೂ ಹೊಳೆಯಲ್ಲಿ ನೀರು ತುಂಬಿ ಹರಿಯುತ್ತಿದೆ. ಬಾಳುಗೋಡು ಸಂಪರ್ಕ ರಸ್ತೆಯಲ್ಲಿರುವ ಸೇತುವೆ ಮುಳುಗಡೆಯಾಗಿದೆ.  ಕಲ್ಲಾಜೆಯಲ್ಲಿ ಭಾರೀ ಮಳೆಯಿಂದ ಹೊಳೆ, ತೋಡುಗಳು ತುಂಬಿ ಹರಿದಿದೆ. ಗ್ರಾಮೀಣ ಜನರಿಗೆ ಭಾರೀ ಮಳೆ ಆತಂಕ ತಂದಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-03-2026 | ಹವಾಮಾನದಲ್ಲಿ ಏಕಾಏಕಿ ಬದಲಾವಣೆ – ರಾಜ್ಯದ ಹಲವೆಡೆ ಸಂಜೆ ಮಳೆ ಸಾಧ್ಯತೆ

ರಾಜ್ಯದ ವಿವಿಧ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಮಲೆನಾಡು ಹಾಗೂ…

13 hours ago

ಎಲ್ಲೆಡೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆ ; ಪ್ರಾಣಿ-ಪಕ್ಷಿಗಳಿಗೆ ನೀರಿನ ಅಭಾವ

ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…

21 hours ago

ಮಹಿಳಾ ಕೃಷಿಕರ ಸಬಲೀಕರಣಕ್ಕೆ ಜಾಗತಿಕ ಘೋಷಣೆ : 900ಕ್ಕೂ ಹೆಚ್ಚು ಕೃಷಿ ಸಂಸ್ಥೆಗಳನ್ನು ಜೋಡಿಸುವ ರಾಷ್ಟ್ರೀಯ ಜೆಂಡರ್ ಪ್ಲಾಟ್‌ಫಾರ್ಮ್‌ ಘೋಷಣೆ

ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…

21 hours ago

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

1 day ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

2 days ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

2 days ago