ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದೆ. ಜು.6 ರಂದು ಕೂಡಾ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಎಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ.
ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಅರೆಂಜ್ ಅಲರ್ಟ್ ಮುಂದುವರಿದಿದೆ. ಬಿರುಗಾಳಿ ಸಹಿತ ಮಳೆಯಾಗಲಿದೆ. ಕಡಲು ಪ್ರಕ್ಷುಬ್ದಗೊಂಡು ಬೃಹತ್ ಗಾತ್ರದ ಅಲೆಗಳು ಕಡಲ ತೀರಕ್ಕೆ ಅಪ್ಪಳಿಸುವ ಬಗ್ಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಜು. 6 ರವರೆಗೆ ಕರಾವಳಿ ಜಿಲ್ಲೆಗಳಾದ ಮಂಗಳೂರಿನಿಂದ ಕಾರವಾರದವರೆಗೆ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಆರ್ಭಟಿಸಲಿದ್ದು. ಈ ಹಿನ್ನೆಲೆಯಲ್ಲಿ ಕಡಲ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಮಳೆಯ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ, ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು, ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…