#HeavyRain|ಕೊಡಗು ಜಿಲ್ಲೆಯಾದ್ಯಂತ ಅಬ್ಬರದ ಮಳೆ : KRSಗೆ ದಾಖಲೆ ಪ್ರಮಾಣದಲ್ಲಿ ಒಳ ಹರಿವು

July 8, 2023
10:29 AM
ಕರಾವಳಿ, ಮಲೆನಾಡಿನಲ್ಲಿ ವರುಣನ ಅಬ್ಬರ, ಹಲವು ದಿನಗಳ ನಂತರ KRSಗೆ ದಾಖಲೆ ಪ್ರಮಾಣದಲ್ಲಿ ಹರಿದು ಬರುತ್ತಿದೆ ನೀರು

ಕರಾವಳಿ ಜಿಲ್ಲೆಗಳು ಸೇರಿದಂತೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಂತೆ ಮಡಿಕೇರಿ#Madikeri ತಾಲೂಕಿನ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಈ ಹಿನ್ನಲೆ ದೋಣಿಕಡವು-ಕೂಡಕಂಡಿ ಪರಂಬು ಸಂಪರ್ಕ‌ ಬೆಸೆಯುವ ಸೇತುವೆ ಜಲಾವೃತವಾಗಿದೆ. ಇತ್ತ ಒಣಗಿ ಹೋಗಿದ್ದ KRS Damಗೆ ಧಾರಾಕಾರ ನೀರು ಹರಿದು ಬರಲು ಆರಂಭವಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ದೋಣಿಕಡವು-ಕೂಡಕಂಡಿ ಪರಂಬು ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.

2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಡ್ಯಾಂ ಬರಿದಾಗುವ ಸಮಯದಲ್ಲಿ ಈ ಪ್ರಮಾಣದ ಒಳಹರಿವು ಕಾವೇರಿ ನೀರು ಅವಲಂಬಿತ ಜನರಲ್ಲಿ ಮಂದಹಾಸ ತರಿಸಿದೆ. 124.80 ಅಡಿಗಳ ಡ್ಯಾಂ 82.00 ಅಡಿಯಲ್ಲಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳ ಹರಿವಿನ ಪ್ರಮಾಣ 13,499 ಕ್ಯೂಸೆಕ್ ಇದ್ದು, ಡ್ಯಾಂ ಹೊರಹರಿವು 353 ಕ್ಯೂಸೆಕ್ ಇದೆ.

ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ
September 8, 2026
9:38 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror