Advertisement
ಸುದ್ದಿಗಳು

#HeavyRain|ಕೊಡಗು ಜಿಲ್ಲೆಯಾದ್ಯಂತ ಅಬ್ಬರದ ಮಳೆ : KRSಗೆ ದಾಖಲೆ ಪ್ರಮಾಣದಲ್ಲಿ ಒಳ ಹರಿವು

Share

ಕರಾವಳಿ ಜಿಲ್ಲೆಗಳು ಸೇರಿದಂತೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಂತೆ ಮಡಿಕೇರಿ#Madikeri ತಾಲೂಕಿನ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಈ ಹಿನ್ನಲೆ ದೋಣಿಕಡವು-ಕೂಡಕಂಡಿ ಪರಂಬು ಸಂಪರ್ಕ‌ ಬೆಸೆಯುವ ಸೇತುವೆ ಜಲಾವೃತವಾಗಿದೆ. ಇತ್ತ ಒಣಗಿ ಹೋಗಿದ್ದ KRS Damಗೆ ಧಾರಾಕಾರ ನೀರು ಹರಿದು ಬರಲು ಆರಂಭವಾಗಿದೆ. ಇದು ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ದೋಣಿಕಡವು-ಕೂಡಕಂಡಿ ಪರಂಬು ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.

2023ನೇ ಸಾಲಿನಲ್ಲಿ ಇದೇ ಅಧಿಕ ಪ್ರಮಾಣದ ಒಳಹರಿವು ಆಗಿದೆ. ಡ್ಯಾಂ ಬರಿದಾಗುವ ಸಮಯದಲ್ಲಿ ಈ ಪ್ರಮಾಣದ ಒಳಹರಿವು ಕಾವೇರಿ ನೀರು ಅವಲಂಬಿತ ಜನರಲ್ಲಿ ಮಂದಹಾಸ ತರಿಸಿದೆ. 124.80 ಅಡಿಗಳ ಡ್ಯಾಂ 82.00 ಅಡಿಯಲ್ಲಿ ನೀರಿದೆ. 49.452 ಟಿಎಂಸಿ ಗರಿಷ್ಠ ಸಾಂದ್ರತೆ ಡ್ಯಾಂನಲ್ಲಿ 11.695 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನ ಒಳ ಹರಿವಿನ ಪ್ರಮಾಣ 13,499 ಕ್ಯೂಸೆಕ್ ಇದ್ದು, ಡ್ಯಾಂ ಹೊರಹರಿವು 353 ಕ್ಯೂಸೆಕ್ ಇದೆ.

ಕೆಆರ್‌ಎಸ್‌ ಜಲಾಶಯದಲ್ಲಿ ನೀರಿನ ಕೊರತೆಯಿಂದಾಗಿ ಬೆಂಗಳೂರು#Bengaluru ಹಾಗೂ ಮೈಸೂರಿಗೆ #Mysuru ಕುಡಿಯುವ ನೀರಿನ ಸಮಸ್ಯೆಯಾಗುವ ಆತಂಕ ಶುರುವಾಗಿತ್ತು. ಇತ್ತೀಚೆಗೆ ಕೊಡಗಿನಲ್ಲಿ ಮಳೆಯಾದ ಕಾರಣ, ಪ್ರಸಕ್ತ ವರ್ಷದಲ್ಲಿ ಕೆಆರ್‌ಎಸ್‌ ಡ್ಯಾಂಗೆ ಮೊದಲ ಬಾರಿಗೆ ಸಾವಿರ ಕ್ಯೂಸೆಕ್‌ ನೀರು ಬಿಡಲಾಗಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

4 hours ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

6 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

10 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

17 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago