ಬಿಪರ್ ಜಾಯ್ | ಬಲಗೊಳ್ಳುತ್ತಿರುವ ಚಂಡಮಾರುತ ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲನೆ | ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಉತ್ತಮ ಮಳೆ ನಿರೀಕ್ಷೆ |

June 10, 2023
9:53 AM

 ಚಂಡಮಾರುತ ಬಿಪರ್‌ ಜಾಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಂಡು   ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ತಿಳಿಸಿದೆ. ಈ ನಡುವೆ ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೇರಳವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ ಎಲ್ಲೋ ಎಲರ್ಟ್ ಘೋಷಿಸಿದೆ.

ತೀವ್ರ ಚಂಡಮಾರುತ ಬಿಪರ್‌ ಜಾಯ್ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಿಂದ ಮುಂದೆ ಸಾಗಿದ್ದು  ಮುಂದಿನ 24 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ  ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದ ವಿವಿದೆಡೆ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror