ಚಂಡಮಾರುತ ಬಿಪರ್ ಜಾಯ್ ಮುಂದಿನ 24 ಗಂಟೆಗಳಲ್ಲಿ ಬಲಗೊಂಡು ಉತ್ತರ-ಈಶಾನ್ಯ ದಿಕ್ಕಿನಲ್ಲಿ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ನಡುವೆ ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದಲ್ಲಿ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೇರಳವು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್ ಮತ್ತು ಕಣ್ಣೂರುಗಳಲ್ಲಿ ಎಲ್ಲೋ ಎಲರ್ಟ್ ಘೋಷಿಸಿದೆ.
ತೀವ್ರ ಚಂಡಮಾರುತ ಬಿಪರ್ ಜಾಯ್ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದಿಂದ ಮುಂದೆ ಸಾಗಿದ್ದು ಮುಂದಿನ 24 ಗಂಟೆಗಳ ಅವಧಿಯಲ್ಲಿ ಮತ್ತಷ್ಟು ತೀವ್ರಗೊಳ್ಳುವ ಮತ್ತು ಉತ್ತರ-ಈಶಾನ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಭಾರತದ ರಾಜ್ಯಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 3 ದಿನಗಳಲ್ಲಿ ಕೇರಳ ಮತ್ತು ಕರಾವಳಿ ಕರ್ನಾಟಕದ ವಿವಿದೆಡೆ ಮತ್ತು ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…