ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |

May 1, 2022
9:35 AM

ಮಳೆ ಭಾನುವಾರ ಮುಂಜಾನೆ ಮತ್ತೆ ಅಬ್ಬರಿಸಿದೆ. ಸುಳ್ಯ ತಾಲೂಕಿನ ವಿವಿದೆಡೆ ಭಾರೀ ಗುಡುಗು ಮಳೆಯಾಗಿದೆ. ಪಂಜ ಆಸುಪಾಸಿನಲ್ಲಿ ಭಾರೀ ಗಾಳಿಗೆ ಕೃಷಿಗೆ ಹಾನಿಯಾಗಿದೆ, ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಕೆಲವು ಮನೆಗಳಿಗೂ ಹಾನಿಯಾಗಿದೆ. ವಾರದಲ್ಲಿ  ಎರಡನೇ ಬಾರಿಗೆ ಗಾಳಿಯ ಅಬ್ಬರ ಕಂಡುಬಂದಿದೆ. ಮರ್ಕಂಜದಲ್ಲೂ ಗಾಳಿಗೆ ಹಾನಿಯಾಗಿತ್ತು, 3 ದಿನಗಳ ಕಾಲ ನಿರಂತರ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. 60 ಕ್ಕೂ ಅಧಿಕ ವಿದ್ಯುತ್‌ ಕಂಬ ತುಂಡಾಗಿತ್ತು.

Advertisement
Advertisement
Advertisement
Advertisement

Advertisement
ಭಾನುವಾರ ಬೆಳಗ್ಗೆ ಗುಡುಗು ಸಿಡಿಲಿನೊಂದಿಗೆ ಆರಂಭವಾದ ಮಳೆಯ ಜೊತೆಗೆ ಭಾರೀ ಗಾಳಿಯೂ ಬೀಸಿದ ಹಿನ್ನೆಲೆಯಲ್ಲಿ ಹಾನಿ ಸಂಭವಿಸಿತು. ಪಂಜದ ಕಂರ್ಬಿ ಆಸುಪಾಸಿನಲ್ಲಿ ಗಾಳಿಗೆ ಅಡಿಕೆ ಮರಗಳು ಧರೆಗೆ ಉರುಳಿದೆ. ಪಂಜದ ಆಸುಪಾಸಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ತುಂಡಾಗಿದೆ. ಸುಳ್ಯ ತಾಲೂಕಿನ ಗುತ್ತಿಗಾರು, ಎಲಿಮಲೆ, ಮೊದಲಾದ ಕಡೆಗಳಲ್ಲಿ  ಗಾಳಿ ಮಳೆ ಕಂಡುಬಂದಿತ್ತು. ಪಂಜದಲ್ಲಿ ಗಣೇಶ್‌ ಕಂರ್ಬಿ ಅವರ ಕೃಷಿ ಹಾನಿಯಾಗಿದೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಗಾಳಿಗೆ ಹಾನಿಯಾಗಿತ್ತು.

ಕಳೆದ ಒಂದು ತಿಂಗಳಿನಲ್ಲಿ ಭಾರೀ ಗಾಳಿಗೆ ಕಲ್ಮಡ್ಕ, ಮರ್ಕಂಜ, ಗುತ್ತಿಗಾರಿನ ಕೆಲವು ಕಡೆ, ಪಂಜ ಸೇರಿದಂತೆ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ವಿಪರೀತ ತಾಪಮಾನ ಹಾಗೂ ಸಂಜೆಯ ವೇಳೆಗೆ ಮಳೆ. ಈ ಎರಡು ಕಾರಣದಿಂದ ಕೃಷಿಗೆ ಹಾನಿಯಾಗುತ್ತಿದೆ, ಗ್ರಾಮೀಣ ಭಾಗಗಳಲ್ಲಿ ಸಂಕಷ್ಟಗಳು ಉಂಟಾಗುತ್ತಿದೆ. ವಿಪರೀತ ತಾಪಮಾನದ ಕಾರಣದಿಂದ ಮಳೆಯ ಜೊತೆಗೆ ಗಾಳಿಯ ಅಬ್ಬರವೂ ಹೆಚ್ಚಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕರು ಹೇಳುತ್ತಾರೆ.

Advertisement

Advertisement

 

ಮಳೆ ಹೇಗಿತ್ತು...?
Advertisement

ಕಳೆದ 24 ಗಂಟೆಯಲ್ಲಿ ಅದರಲ್ಲೂ ಮುಂಜಾನೆ ವಿವಿದೆಡೆ ಸುರಿದ ಮಳೆ ಹೀಗಿತ್ತು ದೊಡ್ಡತೋಟ 51 , ಸುಬ್ರಹ್ಮಣ್ಯ 49 ಮಿಮೀ, ಸುಳ್ಯ ನಗರ 48 ಮಿಮೀ , ಕೇನ್ಯ 46 ಮಿಮೀ,ಕೋಡಿಂಬಾಳ 42 ಮಿ ಮೀ, ಕಲ್ಲಾಜೆ 35 ಮಿಮೀ, ಬಳ್ಪ 30 ಮಿಮೀ, ಎಣ್ಮೂರು 28 ಮಿಮೀ, ಕೊಲ್ಲಮೊಗ್ರ 25  ಮಿಮೀ, ಹರಿಹರ 25 ಮಿಮೀ,  ಕಮಿಲ 20 ಮಿಮೀ,  ಕರಿಕಳ 18 ಮಿಮೀ, ಕೊಳ್ತಿಗೆ 18 ಮಿಮೀ, ,ಕಲ್ಮಡ್ಕ 18 ಮಿಮೀ, ಚೊಕ್ಕಾಡಿ 16 ಮಿಮೀ, ಕೋಡಪದವು 16 ಮಿಮೀ , ಮಡಪ್ಪಾಡಿ 14 ಮಿಮೀ, ವಾಲ್ತಾಜೆ 14 ಮಿಮೀ,  ಚೆಂಬು 13 ಮಿಮೀ, ಮೆಟ್ಟಿನಡ್ಕ 11 ಮಿಮೀ,  ಕೈರಂಗಳ 11 ಮಿಮೀ ,ಮಂಚಿ 7 ಮಿಮೀ, ಕಾವಿನಮೂಲೆ 4 ಮಿಮೀ, ಅಯ್ಯನಕಟ್ಟೆ 3 ಮಿಮೀ ಮಳೆಯಾಗಿದೆ.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror