ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |

May 1, 2022
9:35 AM

ಮಳೆ ಭಾನುವಾರ ಮುಂಜಾನೆ ಮತ್ತೆ ಅಬ್ಬರಿಸಿದೆ. ಸುಳ್ಯ ತಾಲೂಕಿನ ವಿವಿದೆಡೆ ಭಾರೀ ಗುಡುಗು ಮಳೆಯಾಗಿದೆ. ಪಂಜ ಆಸುಪಾಸಿನಲ್ಲಿ ಭಾರೀ ಗಾಳಿಗೆ ಕೃಷಿಗೆ ಹಾನಿಯಾಗಿದೆ, ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಕೆಲವು ಮನೆಗಳಿಗೂ ಹಾನಿಯಾಗಿದೆ. ವಾರದಲ್ಲಿ  ಎರಡನೇ ಬಾರಿಗೆ ಗಾಳಿಯ ಅಬ್ಬರ ಕಂಡುಬಂದಿದೆ. ಮರ್ಕಂಜದಲ್ಲೂ ಗಾಳಿಗೆ ಹಾನಿಯಾಗಿತ್ತು, 3 ದಿನಗಳ ಕಾಲ ನಿರಂತರ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. 60 ಕ್ಕೂ ಅಧಿಕ ವಿದ್ಯುತ್‌ ಕಂಬ ತುಂಡಾಗಿತ್ತು.

ಭಾನುವಾರ ಬೆಳಗ್ಗೆ ಗುಡುಗು ಸಿಡಿಲಿನೊಂದಿಗೆ ಆರಂಭವಾದ ಮಳೆಯ ಜೊತೆಗೆ ಭಾರೀ ಗಾಳಿಯೂ ಬೀಸಿದ ಹಿನ್ನೆಲೆಯಲ್ಲಿ ಹಾನಿ ಸಂಭವಿಸಿತು. ಪಂಜದ ಕಂರ್ಬಿ ಆಸುಪಾಸಿನಲ್ಲಿ ಗಾಳಿಗೆ ಅಡಿಕೆ ಮರಗಳು ಧರೆಗೆ ಉರುಳಿದೆ. ಪಂಜದ ಆಸುಪಾಸಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ತುಂಡಾಗಿದೆ. ಸುಳ್ಯ ತಾಲೂಕಿನ ಗುತ್ತಿಗಾರು, ಎಲಿಮಲೆ, ಮೊದಲಾದ ಕಡೆಗಳಲ್ಲಿ  ಗಾಳಿ ಮಳೆ ಕಂಡುಬಂದಿತ್ತು. ಪಂಜದಲ್ಲಿ ಗಣೇಶ್‌ ಕಂರ್ಬಿ ಅವರ ಕೃಷಿ ಹಾನಿಯಾಗಿದೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಗಾಳಿಗೆ ಹಾನಿಯಾಗಿತ್ತು.

ಕಳೆದ ಒಂದು ತಿಂಗಳಿನಲ್ಲಿ ಭಾರೀ ಗಾಳಿಗೆ ಕಲ್ಮಡ್ಕ, ಮರ್ಕಂಜ, ಗುತ್ತಿಗಾರಿನ ಕೆಲವು ಕಡೆ, ಪಂಜ ಸೇರಿದಂತೆ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ವಿಪರೀತ ತಾಪಮಾನ ಹಾಗೂ ಸಂಜೆಯ ವೇಳೆಗೆ ಮಳೆ. ಈ ಎರಡು ಕಾರಣದಿಂದ ಕೃಷಿಗೆ ಹಾನಿಯಾಗುತ್ತಿದೆ, ಗ್ರಾಮೀಣ ಭಾಗಗಳಲ್ಲಿ ಸಂಕಷ್ಟಗಳು ಉಂಟಾಗುತ್ತಿದೆ. ವಿಪರೀತ ತಾಪಮಾನದ ಕಾರಣದಿಂದ ಮಳೆಯ ಜೊತೆಗೆ ಗಾಳಿಯ ಅಬ್ಬರವೂ ಹೆಚ್ಚಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕರು ಹೇಳುತ್ತಾರೆ.

 

ಮಳೆ ಹೇಗಿತ್ತು...?

ಕಳೆದ 24 ಗಂಟೆಯಲ್ಲಿ ಅದರಲ್ಲೂ ಮುಂಜಾನೆ ವಿವಿದೆಡೆ ಸುರಿದ ಮಳೆ ಹೀಗಿತ್ತು ದೊಡ್ಡತೋಟ 51 , ಸುಬ್ರಹ್ಮಣ್ಯ 49 ಮಿಮೀ, ಸುಳ್ಯ ನಗರ 48 ಮಿಮೀ , ಕೇನ್ಯ 46 ಮಿಮೀ,ಕೋಡಿಂಬಾಳ 42 ಮಿ ಮೀ, ಕಲ್ಲಾಜೆ 35 ಮಿಮೀ, ಬಳ್ಪ 30 ಮಿಮೀ, ಎಣ್ಮೂರು 28 ಮಿಮೀ, ಕೊಲ್ಲಮೊಗ್ರ 25  ಮಿಮೀ, ಹರಿಹರ 25 ಮಿಮೀ,  ಕಮಿಲ 20 ಮಿಮೀ,  ಕರಿಕಳ 18 ಮಿಮೀ, ಕೊಳ್ತಿಗೆ 18 ಮಿಮೀ, ,ಕಲ್ಮಡ್ಕ 18 ಮಿಮೀ, ಚೊಕ್ಕಾಡಿ 16 ಮಿಮೀ, ಕೋಡಪದವು 16 ಮಿಮೀ , ಮಡಪ್ಪಾಡಿ 14 ಮಿಮೀ, ವಾಲ್ತಾಜೆ 14 ಮಿಮೀ,  ಚೆಂಬು 13 ಮಿಮೀ, ಮೆಟ್ಟಿನಡ್ಕ 11 ಮಿಮೀ,  ಕೈರಂಗಳ 11 ಮಿಮೀ ,ಮಂಚಿ 7 ಮಿಮೀ, ಕಾವಿನಮೂಲೆ 4 ಮಿಮೀ, ಅಯ್ಯನಕಟ್ಟೆ 3 ಮಿಮೀ ಮಳೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?
August 7, 2026
11:12 AM
by: ಸಾಯಿಶೇಖರ್ ಕರಿಕಳ
ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ
August 7, 2026
7:34 AM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror