Advertisement
ರಾಜ್ಯ

ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |

Share

ಮಳೆ ಭಾನುವಾರ ಮುಂಜಾನೆ ಮತ್ತೆ ಅಬ್ಬರಿಸಿದೆ. ಸುಳ್ಯ ತಾಲೂಕಿನ ವಿವಿದೆಡೆ ಭಾರೀ ಗುಡುಗು ಮಳೆಯಾಗಿದೆ. ಪಂಜ ಆಸುಪಾಸಿನಲ್ಲಿ ಭಾರೀ ಗಾಳಿಗೆ ಕೃಷಿಗೆ ಹಾನಿಯಾಗಿದೆ, ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಕೆಲವು ಮನೆಗಳಿಗೂ ಹಾನಿಯಾಗಿದೆ. ವಾರದಲ್ಲಿ  ಎರಡನೇ ಬಾರಿಗೆ ಗಾಳಿಯ ಅಬ್ಬರ ಕಂಡುಬಂದಿದೆ. ಮರ್ಕಂಜದಲ್ಲೂ ಗಾಳಿಗೆ ಹಾನಿಯಾಗಿತ್ತು, 3 ದಿನಗಳ ಕಾಲ ನಿರಂತರ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. 60 ಕ್ಕೂ ಅಧಿಕ ವಿದ್ಯುತ್‌ ಕಂಬ ತುಂಡಾಗಿತ್ತು.

ಭಾನುವಾರ ಬೆಳಗ್ಗೆ ಗುಡುಗು ಸಿಡಿಲಿನೊಂದಿಗೆ ಆರಂಭವಾದ ಮಳೆಯ ಜೊತೆಗೆ ಭಾರೀ ಗಾಳಿಯೂ ಬೀಸಿದ ಹಿನ್ನೆಲೆಯಲ್ಲಿ ಹಾನಿ ಸಂಭವಿಸಿತು. ಪಂಜದ ಕಂರ್ಬಿ ಆಸುಪಾಸಿನಲ್ಲಿ ಗಾಳಿಗೆ ಅಡಿಕೆ ಮರಗಳು ಧರೆಗೆ ಉರುಳಿದೆ. ಪಂಜದ ಆಸುಪಾಸಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ತುಂಡಾಗಿದೆ. ಸುಳ್ಯ ತಾಲೂಕಿನ ಗುತ್ತಿಗಾರು, ಎಲಿಮಲೆ, ಮೊದಲಾದ ಕಡೆಗಳಲ್ಲಿ  ಗಾಳಿ ಮಳೆ ಕಂಡುಬಂದಿತ್ತು. ಪಂಜದಲ್ಲಿ ಗಣೇಶ್‌ ಕಂರ್ಬಿ ಅವರ ಕೃಷಿ ಹಾನಿಯಾಗಿದೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಗಾಳಿಗೆ ಹಾನಿಯಾಗಿತ್ತು.

ಕಳೆದ ಒಂದು ತಿಂಗಳಿನಲ್ಲಿ ಭಾರೀ ಗಾಳಿಗೆ ಕಲ್ಮಡ್ಕ, ಮರ್ಕಂಜ, ಗುತ್ತಿಗಾರಿನ ಕೆಲವು ಕಡೆ, ಪಂಜ ಸೇರಿದಂತೆ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ವಿಪರೀತ ತಾಪಮಾನ ಹಾಗೂ ಸಂಜೆಯ ವೇಳೆಗೆ ಮಳೆ. ಈ ಎರಡು ಕಾರಣದಿಂದ ಕೃಷಿಗೆ ಹಾನಿಯಾಗುತ್ತಿದೆ, ಗ್ರಾಮೀಣ ಭಾಗಗಳಲ್ಲಿ ಸಂಕಷ್ಟಗಳು ಉಂಟಾಗುತ್ತಿದೆ. ವಿಪರೀತ ತಾಪಮಾನದ ಕಾರಣದಿಂದ ಮಳೆಯ ಜೊತೆಗೆ ಗಾಳಿಯ ಅಬ್ಬರವೂ ಹೆಚ್ಚಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕರು ಹೇಳುತ್ತಾರೆ.

 

ಮಳೆ ಹೇಗಿತ್ತು...?

ಕಳೆದ 24 ಗಂಟೆಯಲ್ಲಿ ಅದರಲ್ಲೂ ಮುಂಜಾನೆ ವಿವಿದೆಡೆ ಸುರಿದ ಮಳೆ ಹೀಗಿತ್ತು ದೊಡ್ಡತೋಟ 51 , ಸುಬ್ರಹ್ಮಣ್ಯ 49 ಮಿಮೀ, ಸುಳ್ಯ ನಗರ 48 ಮಿಮೀ , ಕೇನ್ಯ 46 ಮಿಮೀ,ಕೋಡಿಂಬಾಳ 42 ಮಿ ಮೀ, ಕಲ್ಲಾಜೆ 35 ಮಿಮೀ, ಬಳ್ಪ 30 ಮಿಮೀ, ಎಣ್ಮೂರು 28 ಮಿಮೀ, ಕೊಲ್ಲಮೊಗ್ರ 25  ಮಿಮೀ, ಹರಿಹರ 25 ಮಿಮೀ,  ಕಮಿಲ 20 ಮಿಮೀ,  ಕರಿಕಳ 18 ಮಿಮೀ, ಕೊಳ್ತಿಗೆ 18 ಮಿಮೀ, ,ಕಲ್ಮಡ್ಕ 18 ಮಿಮೀ, ಚೊಕ್ಕಾಡಿ 16 ಮಿಮೀ, ಕೋಡಪದವು 16 ಮಿಮೀ , ಮಡಪ್ಪಾಡಿ 14 ಮಿಮೀ, ವಾಲ್ತಾಜೆ 14 ಮಿಮೀ,  ಚೆಂಬು 13 ಮಿಮೀ, ಮೆಟ್ಟಿನಡ್ಕ 11 ಮಿಮೀ,  ಕೈರಂಗಳ 11 ಮಿಮೀ ,ಮಂಚಿ 7 ಮಿಮೀ, ಕಾವಿನಮೂಲೆ 4 ಮಿಮೀ, ಅಯ್ಯನಕಟ್ಟೆ 3 ಮಿಮೀ ಮಳೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

7 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago