Advertisement
ರಾಜ್ಯ

ಮತ್ತೆ ಮಳೆಯಬ್ಬರ | ಮುಂಜಾನೆ ಸುರಿದ ಗಾಳಿ ಮಳೆಗೆ ಪಂಜ ಆಸುಪಾಸಿನಲ್ಲಿ ಹಾನಿ |

Share

ಮಳೆ ಭಾನುವಾರ ಮುಂಜಾನೆ ಮತ್ತೆ ಅಬ್ಬರಿಸಿದೆ. ಸುಳ್ಯ ತಾಲೂಕಿನ ವಿವಿದೆಡೆ ಭಾರೀ ಗುಡುಗು ಮಳೆಯಾಗಿದೆ. ಪಂಜ ಆಸುಪಾಸಿನಲ್ಲಿ ಭಾರೀ ಗಾಳಿಗೆ ಕೃಷಿಗೆ ಹಾನಿಯಾಗಿದೆ, ವಿದ್ಯುತ್‌ ಕಂಬಗಳು ಧರೆಗೆ ಉರುಳಿದೆ. ಕೆಲವು ಮನೆಗಳಿಗೂ ಹಾನಿಯಾಗಿದೆ. ವಾರದಲ್ಲಿ  ಎರಡನೇ ಬಾರಿಗೆ ಗಾಳಿಯ ಅಬ್ಬರ ಕಂಡುಬಂದಿದೆ. ಮರ್ಕಂಜದಲ್ಲೂ ಗಾಳಿಗೆ ಹಾನಿಯಾಗಿತ್ತು, 3 ದಿನಗಳ ಕಾಲ ನಿರಂತರ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತ್ತು. 60 ಕ್ಕೂ ಅಧಿಕ ವಿದ್ಯುತ್‌ ಕಂಬ ತುಂಡಾಗಿತ್ತು.

ಭಾನುವಾರ ಬೆಳಗ್ಗೆ ಗುಡುಗು ಸಿಡಿಲಿನೊಂದಿಗೆ ಆರಂಭವಾದ ಮಳೆಯ ಜೊತೆಗೆ ಭಾರೀ ಗಾಳಿಯೂ ಬೀಸಿದ ಹಿನ್ನೆಲೆಯಲ್ಲಿ ಹಾನಿ ಸಂಭವಿಸಿತು. ಪಂಜದ ಕಂರ್ಬಿ ಆಸುಪಾಸಿನಲ್ಲಿ ಗಾಳಿಗೆ ಅಡಿಕೆ ಮರಗಳು ಧರೆಗೆ ಉರುಳಿದೆ. ಪಂಜದ ಆಸುಪಾಸಿನಲ್ಲಿ ಮರಗಳು, ವಿದ್ಯುತ್‌ ಕಂಬಗಳು ತುಂಡಾಗಿದೆ. ಸುಳ್ಯ ತಾಲೂಕಿನ ಗುತ್ತಿಗಾರು, ಎಲಿಮಲೆ, ಮೊದಲಾದ ಕಡೆಗಳಲ್ಲಿ  ಗಾಳಿ ಮಳೆ ಕಂಡುಬಂದಿತ್ತು. ಪಂಜದಲ್ಲಿ ಗಣೇಶ್‌ ಕಂರ್ಬಿ ಅವರ ಕೃಷಿ ಹಾನಿಯಾಗಿದೆ. ಕಳೆದ ವರ್ಷವೂ ಈ ಪ್ರದೇಶದಲ್ಲಿ ಗಾಳಿಗೆ ಹಾನಿಯಾಗಿತ್ತು.

ಕಳೆದ ಒಂದು ತಿಂಗಳಿನಲ್ಲಿ ಭಾರೀ ಗಾಳಿಗೆ ಕಲ್ಮಡ್ಕ, ಮರ್ಕಂಜ, ಗುತ್ತಿಗಾರಿನ ಕೆಲವು ಕಡೆ, ಪಂಜ ಸೇರಿದಂತೆ ಹಲವು ಕಡೆಗಳಲ್ಲಿ ಹಾನಿಯಾಗಿದೆ. ಮಧ್ಯಾಹ್ನದ ವೇಳೆಗೆ ವಿಪರೀತ ತಾಪಮಾನ ಹಾಗೂ ಸಂಜೆಯ ವೇಳೆಗೆ ಮಳೆ. ಈ ಎರಡು ಕಾರಣದಿಂದ ಕೃಷಿಗೆ ಹಾನಿಯಾಗುತ್ತಿದೆ, ಗ್ರಾಮೀಣ ಭಾಗಗಳಲ್ಲಿ ಸಂಕಷ್ಟಗಳು ಉಂಟಾಗುತ್ತಿದೆ. ವಿಪರೀತ ತಾಪಮಾನದ ಕಾರಣದಿಂದ ಮಳೆಯ ಜೊತೆಗೆ ಗಾಳಿಯ ಅಬ್ಬರವೂ ಹೆಚ್ಚಾಗುತ್ತಿದೆ ಎಂದು ಹವಾಮಾನ ವಿಶ್ಲೇಷಕರು ಹೇಳುತ್ತಾರೆ.

 

ಮಳೆ ಹೇಗಿತ್ತು...?

ಕಳೆದ 24 ಗಂಟೆಯಲ್ಲಿ ಅದರಲ್ಲೂ ಮುಂಜಾನೆ ವಿವಿದೆಡೆ ಸುರಿದ ಮಳೆ ಹೀಗಿತ್ತು ದೊಡ್ಡತೋಟ 51 , ಸುಬ್ರಹ್ಮಣ್ಯ 49 ಮಿಮೀ, ಸುಳ್ಯ ನಗರ 48 ಮಿಮೀ , ಕೇನ್ಯ 46 ಮಿಮೀ,ಕೋಡಿಂಬಾಳ 42 ಮಿ ಮೀ, ಕಲ್ಲಾಜೆ 35 ಮಿಮೀ, ಬಳ್ಪ 30 ಮಿಮೀ, ಎಣ್ಮೂರು 28 ಮಿಮೀ, ಕೊಲ್ಲಮೊಗ್ರ 25  ಮಿಮೀ, ಹರಿಹರ 25 ಮಿಮೀ,  ಕಮಿಲ 20 ಮಿಮೀ,  ಕರಿಕಳ 18 ಮಿಮೀ, ಕೊಳ್ತಿಗೆ 18 ಮಿಮೀ, ,ಕಲ್ಮಡ್ಕ 18 ಮಿಮೀ, ಚೊಕ್ಕಾಡಿ 16 ಮಿಮೀ, ಕೋಡಪದವು 16 ಮಿಮೀ , ಮಡಪ್ಪಾಡಿ 14 ಮಿಮೀ, ವಾಲ್ತಾಜೆ 14 ಮಿಮೀ,  ಚೆಂಬು 13 ಮಿಮೀ, ಮೆಟ್ಟಿನಡ್ಕ 11 ಮಿಮೀ,  ಕೈರಂಗಳ 11 ಮಿಮೀ ,ಮಂಚಿ 7 ಮಿಮೀ, ಕಾವಿನಮೂಲೆ 4 ಮಿಮೀ, ಅಯ್ಯನಕಟ್ಟೆ 3 ಮಿಮೀ ಮಳೆಯಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

6 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

14 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

16 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

21 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

23 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago