Advertisement
MIRROR FOCUS

ಕಡಿಮೆಯಾಗದ ಮಳೆ…… ! | ಮುಂಗಾರು ಮಾದರಿಯಲ್ಲಿ ಮೋಡಗಳ ಚಲನೆ…! | ಕೃಷಿಕನ ಕತೆ ಏನು ? |

Share

ನವೆಂಬರ್‌ ತಿಂಗಳು ಅಂತ್ಯವಾಗುವ ಹೊತ್ತು ಬಂದಿದೆ. ಹಾಗಿದ್ದರೂ ಮಳೆ ಕಡಿಮೆಯಾಗಲಿಲ್ಲ..! . ಈ ಚಿಂತೆ ಈಗ ರಾಜ್ಯದ ಎಲ್ಲಾ ಕೃಷಿಕರನ್ನೂ ಕಾಡುತ್ತಿದೆ. ಈ ಚಿಂತೆಯ ಕಡೆಗೆ ಸರ್ಕಾರ ಚಿಂತನೆ ನಡೆಸಬೇಕಾದ ದಿನ ಹತ್ತಿರ ಇದೆ.

ಮಳೆ ಕಳೆದು ಚಳಿ ಆರಂಭವಾಗಬೇಕಾದ ಹೊತ್ತು, ಹಸಿರಾದ ಗಿಡದಲ್ಲಿ  ಪೈರು ಬೆಳೆದು ಕಟಾವಿನ ಹೊತ್ತು, ಹೊಸ ಫಸಲು ಕೈಸೇರುವ ಹೊತ್ತಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಇಡೀ ಕೃಷಿ ಸಮೂಹ ಸಂಕಷ್ಟ ಅನುಭವಿಸುತ್ತಿದೆ. ಭತ್ತ, ರಾಗಿ, ಜೋಳ, ಅಡಿಕೆ, ರಬ್ಬರ್‌ ಸೇರಿದಂತೆ ಎಲ್ಲಾ ಬೆಳೆಯ ಮೇಲೂ ಈಗ ಮಳೆಯ ಪರಿಣಾಮ ಹೆಚ್ಚಾಗುತ್ತಿದೆ. ಈಗ ನೋಡಿದರೆ ಇನ್ನೂ ಮಳೆ ಹೆಚ್ಚಾಗುವ ಅಥವಾ ಇನ್ನೂ ಕೆಲವು ದಿನ ಮಳೆಯಾಗುವ ಸೂಚನೆ ಇದೆ. ಏಕೆಂದರೆ ಅರಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಾಣುತ್ತಿವೆ. ಇದರ ಪರಿಣಾಮ ಮುಂಗಾರು ಮಳೆಯ ಮಾದರಿಯಲ್ಲಿ ಗಾಳಿಯ ಹಾಗೂ ಮೋಡಗಳ ಚಲನೆ ಕಾಣುತ್ತಿದೆ. ಒಂದು ವೇಳೆ ಹವಾಮಾನದ ಈ ಬದಲಾವಣೆ ಸರಿಯಾಗದೇ ಇದ್ದರೆ ಈ ವರ್ಷ ಎಲ್ಲಾ ಕೃಷಿಕರೂ ಸಂಕಷ್ಟ ಪಡಬೇಕಾಗಬಹುದು. ಅದರಲ್ಲೂ ಆಹಾರ ಬೆಳೆ ಸಂಕಷ್ಟಕ್ಕೆ ಸಿಲುಕಿದರೆ ಆಹಾರ ದಾಸ್ತಾನು ಮೇಲೂ ಪರಿಣಾಮ ಬೀರಬಹುದು  ಎಂಬ ವಿಶ್ಲೇಷಣೆ ಇದೆ.

ಅಕಾಲಿಕ ಮಳೆ ಕಾರಣದಿಂದ ಭತ್ತದ ಬೆಳೆ ಕೊಯ್ಲು ಮಾಡಿ, ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲಿ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಚೆನ್ನಾಗಿ ಬಂದ ಬೆಳೆಯನ್ನು ನೋಡಿದರೆ, ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬಂತಾಗಿದೆ. ಈ ಸಾಲಿನಲ್ಲಿ ಭತ್ತ,ಜೋಳ, ಬಾಳೆ, ಅಡಿಕೆ, ರಾಗಿ, ಬೇಳೆ-ಕಾಳುಗಳು, ಈರುಳ್ಳಿ, ತರಕಾರಿ, ಸೊಪ್ಪು ಇನ್ನಿತರ ಬೆಳೆಗಳು ಈ ಮಳೆಯ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿದೆ.

 

ಅಡಿಕೆ ಬೆಳೆಗಾರರದೂ ಇದೇ ಸಮಸ್ಯೆ. ನವೆಂಬರ್‌ ಅಂತ್ಯದ ವೇಳೆಗೆ ಅಡಿಕೆ ಕಟಾವು ಮಾಡಿ ಒಣಗಿಸುವ ಕಾಲ. ಆದರೆ ಈ ಬಾರಿ ಮಳೆಯೇ ಕಡಿಮೆಯಾಗಲಿಲ್ಲ. ಹೀಗಾಗಿ ವಾತಾವರಣದ ಕಾರಣದಿಂದ ಅಡಿಕೆ ಬೇಗನೆ ಹಣ್ಣಾಗಿ ಬೀಳುತ್ತಿದೆ, ಮಳೆಯ ಕಾರಣದಿಂದ ಅಡಿಕೆ ಒಣಗಿಸಲಾಗದ ಸ್ಥಿತಿಯಾಗಿದೆ. ಹೀಗಾಗಿ ಸಂಕಷ್ಟದಿಂದ ಅಡಿಕೆ ಬೆಳೆಗಾರರು ಒದ್ದಾಟ ಮಾಡುತ್ತಿದ್ದಾರೆ.

ರಬ್ಬರ್‌ ಬೆಳೆಗಾರರದೂ ಅದೇ ಸ್ಥಿತಿ. ಪ್ಲಾಸ್ಟಿಕ್‌ ಅಳವಡಿಕೆ ಮಾಡಿ ರಬ್ಬರ್‌ ಟ್ಯಾಪಿಂಗ್‌ ಮಾಡುತ್ತಿದ್ದರೂ ರಬ್ಬರ್‌ ಒಣಗಿಸಲು ಸಂಕಷ್ಟ ಹಾಗೂ ಭಾರೀ ಮಳೆಯಾದರೆ ಟ್ಯಾಪಿಂಗ್‌ ಸಮಸ್ಯೆಯೂ ಕಾಡುತ್ತಿದೆ. ಚಳಿ ಆರಂಭವಾಗಬೇಕಾದ ಕಾರಣ ಇಳುವರಿಯಲ್ಲೂ ಕೊರತೆ ಇದೆ. ಕೇರಳದಲ್ಲಿ ಭಾರೀ ಮಳೆಯ ಕಾರಣದಿಂದ ಟ್ಯಾಪಿಂಗ್‌ ಬಹುತೇಕ ಕಡೆ ನಿಲ್ಲಿಸಲಾಗಿದೆ.

 

ಈ ಎಲ್ಲಾ ಕಾರಣದಿಂದ ಸರಕಾರ ಬಹುಬೇಗನೆ ಕೃಷಿಕರ ಕಡೆಗೆ ಗಮನಿಸಬೇಕಾಗಿದೆ.  ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಬೇಕಾಗಿದೆ. ಪ್ರತೀ ತಾಲೂಕಿನಲ್ಲಿ ಗ್ರಾಮಮಟ್ಟದಲ್ಲಿ ಪರಿಶೀಲನೆ, ಸಮೀಕ್ಷೆ ನಡೆಸಿ  ರೈತರಿಗೆ ಆದ ನಷ್ಟದ ಬಗ್ಗೆ ಗಮನಿಸಬೇಕಾಗಿದೆ, ಅಗತ್ಯ ಇದ್ದರೆ ಸಂಕಷ್ಟದಲ್ಲಿರುವ ರೈತರ ಪರವಾಗಿ ಉಳಿದ ಬೆಳೆಗೆ ಸರಿಯಾದ ಬೆಲೆ ಸಿಗುವ ವ್ಯವಸ್ಥೆ ಮಾಡಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

12 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

12 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago