ಈ ಬಾರಿ ಮಳೆಯೋ ಮಳೆ. ಮಲೆನಾಡು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಮಾರ್ಚ್ ನಂತರ ಆಗಾಗ ಮಳೆಯಾಗುತ್ತಲೇ ಇತ್ತು. ಅಂದರೆ ಸುಮಾರು 8 ತಿಂಗಳು ಮಳೆಯ ತಿಂಗಳಾಗಿದೆ. ಮಾಹಿತಿ ಪ್ರಕಾರ 51 ವರ್ಷಗಳ ಬಳಿಕ ಈ ವರ್ಷದಲ್ಲಿ ಅಧಿಕ ಮಳೆಯಾಗಿದೆ.
ಈ ಬಾರಿಯ ಭಾರೀ ಮಳೆ ರಾಜ್ಯದ ಹಲವು ಕಡೆ ಅವಾಂತರ ಸೃಷ್ಟಿಸಿದೆ. ಕರಾವಳಿ ಜಿಲ್ಲೆಗಳಲ್ಲಿ, ಮಲೆನಾಡಿನಲ್ಲಿ ಅಪಾರ ಹಾನಿಯಾಗಿದ್ದರೆ ನಗರ ಪ್ರದೇಶದಲ್ಲೂ ಮಳೆಯ ಹಾನಿ ತಪ್ಪಿಸಲು ಆಗಿಲ್ಲ. ಸಿಲಿಕಾನ್ ಸಿಟಿಯಲ್ಲೂ ಮಳೆಯ ಅವಾಂತರದಿಂದ ರಸ್ತೆ, ಅಪಾರ್ಮೆಂಟ್, ವಿಲ್ಲಾಗಳು ಜಲಾವೃತಗೊಂಡಿವೆ. ಕಳೆದ 51 ವರ್ಷಗಳಲ್ಲೇ ಸುರಿದ ದಾಖಲೆಯ ಮಳೆಯಾಗಿದೆ ಈ ವರ್ಷ.
ಮಾರ್ಚ್ ನಂತರ ಮಲೆನಾಡು ಪ್ರದೇಶದ ಅಲ್ಲಲ್ಲಿ ಮಳೆಯಾಗಿದ್ದರೂ ಜೂನ್ ತಿಂಗಳಲ್ಲಿ ಮಳೆಯ ಕೊರತೆ ಕಂಡುಬಂದಿತ್ತು. ವಾಯುಭಾರ ಕುಸಿತದ ಕಾರಣದಿಂದ ಹವಾಮಾನದ ಏರುಪೇರು ಕಂಡುಬಂದಿತ್ತು. ಅದಾದ ನಂತರ ಜುಲೈ ಮತ್ತು ಆಗಸ್ಟ್ ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಈಗ ಸೆಪ್ಟಂಬರ್ ತಿಂಗಳಿನಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ದಾಖಲೆಗಳ ಪ್ರಕಾರ 1971 ರಿಂದ 2021 ರ ಜುಲೈವರೆಗೆ ಯಾವತ್ತೂ ಇಷ್ಟು ಮಳೆಯಾಗಿರಲಿಲ್ಲ. ಇನ್ನೂ ಕೂಡಾ ಮಳೆ ಸುರಿಯುತ್ತಲೇ ಇದೆ. ಈಗ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.
ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…