#SulliaRains | ಧಾರಾಕಾರ ಮಳೆ | ತೋಟಗಳಿಗೆ ನುಗ್ಗಿದ ನದಿ ನೀರು | ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆ | ಭಕ್ತಾದಿಗಳಿಗೆ ಎಚ್ಚರಿಕೆ ನೀಡಲು ಕ್ರಮ |

July 23, 2023
1:32 PM
ಸುಳ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಗ್ರಾಮೀಣ ಪ್ರದೇಶದಲ್ಲಿ ಹೊಳೆಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದ್ದು, ಹಲವು ಕೃಷಿ ಭೂಮಿಗೆ ನೀರು ನುಗ್ಗಿದೆ.

ಸುಳ್ಯ  ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿಯುತ್ತಿದೆ. ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆಯೇ ಗ್ರಾಮೀಣ ಭಾಗದ ಹೊಳೆಗಳಲ್ಲೂ ನೀರಿನ ಮಟ್ಟ ಏರಿಕೆಯಾಗಿ ಹಲವು ತೋಟಗಳಿಗೆ ನೀರು ನುಗ್ಗಿದೆ. ಇದೇ ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ಮಾತ್ರವಲ್ಲ ಘಟ್ಟ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಸುಳ್ಯದ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಹರಿಹರ, ಬಾಳುಗೋಡು ಮೊದಲಾದ ಕಡೆಗಳಲ್ಲೂ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರು ಏರಿಕೆಯಾಗುತ್ತಿದ್ದಂತೆಯೇ ಉಪನದಿಗಳಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತದೆ. ಈ ಬಾರಿ ಅದೇ ಪರಿಣಾಮ ಕಂಡುಬಂದಿದೆ. ಹಲವು ಹೊಳೆ, ನದಿಗಳಲ್ಲೂ ನೀರು ಏರಿಕೆಯಾಗುತ್ತಿದೆ. ಈ ರೀತಿಯಾಗುವುದರಿಂದ ಮಣ್ಣು ಸಡಿಲವಾಗಿ ಗುಡ್ಡ ಕುಸಿತಗಳೂ ಸಂಭವಿಸುತ್ತವೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಎದುರಾಗುತ್ತದೆ.

ಕಲ್ಲಾಜೆಯಲ್ಲಿ ತೋಟಕ್ಕೆ ನುಗ್ಗಿದ ನೀರು | Photo Credit : Sijo Abraham, Kallaje

ಇದೇ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮುನ್ನೆಚ್ಚರಿಕಾ ಮಾಹಿತಿಗಳನ್ನು ನೀಡಲಾಗುತ್ತಿದೆ. ನದಿಗೆ ಇಳಿಯದಂತೆ ಹಾಗೂ ನೀರು ಇರುವ ತಗ್ಗು ಪ್ರದೇಶಗಳಿಗೆ ಭಕ್ತಾದಿಗಳು ತೆರಳದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಕುಮಾರಧಾರಾ ಬಳಿ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ಹಲವು ರಸ್ತೆಗಳು ಸಂಪರ್ಕ ಕಡಿತಗೊಂಡಿವೆ.ಪಂಜದ ಬೊಳ್ಮಲೆ ಬಸ್ತಿಕಾಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ
April 6, 2026
6:59 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror