Advertisement
The Rural Mirror ಫಾಲೋಅಪ್

#SulliaRains | ಧಾರಾಕಾರ ಮಳೆ | ತೋಟಗಳಿಗೆ ನುಗ್ಗಿದ ನದಿ ನೀರು | ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆ | ಭಕ್ತಾದಿಗಳಿಗೆ ಎಚ್ಚರಿಕೆ ನೀಡಲು ಕ್ರಮ |

Share

ಸುಳ್ಯ  ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿಯುತ್ತಿದೆ. ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದಂತೆಯೇ ಗ್ರಾಮೀಣ ಭಾಗದ ಹೊಳೆಗಳಲ್ಲೂ ನೀರಿನ ಮಟ್ಟ ಏರಿಕೆಯಾಗಿ ಹಲವು ತೋಟಗಳಿಗೆ ನೀರು ನುಗ್ಗಿದೆ. ಇದೇ ವೇಳೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಎಚ್ಚರಿಕೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕುಕ್ಕೆ ಸುಬ್ರಹ್ಮಣ್ಯ ಮಾತ್ರವಲ್ಲ ಘಟ್ಟ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಸುಳ್ಯದ ಸುಬ್ರಹ್ಮಣ್ಯ, ಕೊಲ್ಲಮೊಗ್ರ, ಹರಿಹರ, ಬಾಳುಗೋಡು ಮೊದಲಾದ ಕಡೆಗಳಲ್ಲೂ ಹೊಳೆ, ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಕುಮಾರಧಾರಾ ನದಿಯಲ್ಲಿ ನೀರು ಏರಿಕೆಯಾಗುತ್ತಿದ್ದಂತೆಯೇ ಉಪನದಿಗಳಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತದೆ. ಈ ಬಾರಿ ಅದೇ ಪರಿಣಾಮ ಕಂಡುಬಂದಿದೆ. ಹಲವು ಹೊಳೆ, ನದಿಗಳಲ್ಲೂ ನೀರು ಏರಿಕೆಯಾಗುತ್ತಿದೆ. ಈ ರೀತಿಯಾಗುವುದರಿಂದ ಮಣ್ಣು ಸಡಿಲವಾಗಿ ಗುಡ್ಡ ಕುಸಿತಗಳೂ ಸಂಭವಿಸುತ್ತವೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಆತಂಕ ಎದುರಾಗುತ್ತದೆ.

ಕಲ್ಲಾಜೆಯಲ್ಲಿ ತೋಟಕ್ಕೆ ನುಗ್ಗಿದ ನೀರು | Photo Credit : Sijo Abraham, Kallaje

ಇದೇ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ಮುನ್ನೆಚ್ಚರಿಕಾ ಮಾಹಿತಿಗಳನ್ನು ನೀಡಲಾಗುತ್ತಿದೆ. ನದಿಗೆ ಇಳಿಯದಂತೆ ಹಾಗೂ ನೀರು ಇರುವ ತಗ್ಗು ಪ್ರದೇಶಗಳಿಗೆ ಭಕ್ತಾದಿಗಳು ತೆರಳದಂತೆ ಎಚ್ಚರಿಕೆ ನೀಡಲಾಗುತ್ತಿದೆ. ಕುಮಾರಧಾರಾ ಬಳಿ ಭದ್ರತಾ ಸಿಬಂದಿಗಳನ್ನು ನಿಯೋಜನೆ ಮಾಡಲಾಗಿದೆ.

ಗ್ರಾಮೀಣ ಭಾಗದಲ್ಲಿ ಹಲವು ರಸ್ತೆಗಳು ಸಂಪರ್ಕ ಕಡಿತಗೊಂಡಿವೆ.ಪಂಜದ ಬೊಳ್ಮಲೆ ಬಸ್ತಿಕಾಡು ರಸ್ತೆ ಸಂಪರ್ಕ ಕಡಿತಗೊಂಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

12 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

18 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago