ವೆದರ್ ಮಿರರ್

ಹವಾಮಾನ ವರದಿ | 18-07-2024 | ಕರಾವಳಿ ಜೆಲ್ಲೆಗಳಾದ್ಯಂತ ಭಾರಿ ಮಳೆ | ಜು.20 ರ ನಂತರವೇ ಮಳೆ ಕಡಿಮೆ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

19.07.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕಲಬುರ್ಗಿ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಚಾಮರಾಜನಗರ, ರಾಮನಗರ, ಗದಗ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿ ಒಡಿಸ್ಸಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದರಿಂದ ಉತ್ತರ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇನ್ನೂ 2 ದಿನಗಳ ಕಾಲ ಉತ್ತಮ ಹಾಗೂ ಅಲ್ಲಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ತಿರುಗುವಿಕೆಯು ಜುಲೈ 21ರಂದು ಒಡಿಸ್ಸಾಕ್ಕೆ ಪ್ರವೇಶಿಸುವ ಸಾಧ್ಯತೆಗಳಿದ್ದು, ಮುಂದಿನ 2 ದಿವಸಗಳಲ್ಲಿ ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯ ಮುನ್ಸೂಚೆನೆ ಇದೆ. ಇದರಿಂದ ಮಹಾರಾಷ್ಟ್ರದಿಂದ ಹರಿದು ಬರುವ ಉತ್ತರ ಕರ್ನಾಟಕದ ನದಿ ಪಾತ್ರಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಬಹುದು.

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಜುಲೈ 20ರಿಂದ ಭಾರಿ ಮಳೆ ಕಡಿಮೆಯಾದರೂ ಮುಂದಿನ 10 ದಿನಗಳವರೆಗೂ ಮಳೆ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಒಳನಾಡು ಭಾಗಗಳಲ್ಲಿ ಜುಲೈ 20ರ ನಂತರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

3 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

3 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

6 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

6 hours ago

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ, …

6 hours ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಅನಿರ್ಧಿಷ್ಟಾವದಿ ಲಾರಿ ಮುಷ್ಕರ | ಸಂಧಾನ ಮಾತುಕತೆಯೂ ವಿಫಲ |

ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…

6 hours ago