Advertisement
MIRROR FOCUS

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

Share

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ. 

Advertisement
Advertisement
Advertisement
Advertisement

ಸತತವಾಗಿ ಸುರಿಯುತ್ತಿರುವ  ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.

Advertisement

ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು.  ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ.  ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.  ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.

ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು   ರೈತ ಬಸವನಗೌಡ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶರಾವತಿ ಮುಳುಗಡೆ ಸಂತ್ರಸ್ತರ ಹಕ್ಕುಪತ್ರ ನೀಡಲು ಒತ್ತಾಯಿಸಿ ಧರಣಿ

ಅರಣ್ಯವಾಸಿಗಳ ಕೃಷಿ ಭೂಮಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ…

35 mins ago

ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ

ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್…

1 hour ago

ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |

ನ.2 ರಿಂದ 10ರ ವರೆಗೆ ಹವ್ಯಾಸಿ ಛಾಯಾಚಿತ್ರ ಗ್ರಾಹಕ ಅಭಿಷೇಕ.ಡಿ,ಪುಂಡಿತ್ತೂರು ಅವರ ಪಕ್ಷಿ,…

1 hour ago

24 ರಿಂದ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ

ಅ.24ರಿಂದ  ನ 3ರವರೆಗೆ  ಹಾಸನಾಂಬೆ ಜಾತ್ರೆ ನಡೆಯಲಿದೆ.

3 hours ago

ಎಮ್ಮೆ-ಹಸುಗಳು ಸಾವನ್ನಪ್ಪಿದರೆ ಪರಿಹಾರ |

ಎಮ್ಮೆ ಹಸುಗಳು ಸಾವನ್ನಪ್ಪಿದರೆ ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪಶುಸಂಗೋಪನಾ…

3 hours ago

ಗ್ರಾಮೀಣ ಕೃಷಿ ಕಾರ್ಯ ಅನುಭವ | ವಿದ್ಯಾರ್ಥಿಗಳಿಂದ ಹೊಸ ಪ್ರಯೋಗ |

ಪದವಿಯಲ್ಲಿ ಕಲಿತ ಕೃಷಿ ಆಧಾರಿತ ತಂತ್ರಜ್ಞಾನ ಹಾಗೂ ಮಾಹಿತಿಯನ್ನು ರೈತರಿಗೆ ತಿಳಿಸಿ, ಅವರಿಂದ…

3 hours ago