Advertisement
MIRROR FOCUS

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

Share

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ. 

ಸತತವಾಗಿ ಸುರಿಯುತ್ತಿರುವ  ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು.  ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ.  ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.  ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.

ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು   ರೈತ ಬಸವನಗೌಡ ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 hour ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

2 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

2 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

9 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

14 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

14 hours ago