Advertisement
MIRROR FOCUS

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

Share

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ. 

Advertisement
Advertisement

ಸತತವಾಗಿ ಸುರಿಯುತ್ತಿರುವ  ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು.  ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ.  ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.  ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.

ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು   ರೈತ ಬಸವನಗೌಡ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

15 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

24 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago