MIRROR FOCUS

ರಾಜ್ಯದ ಹಲವೆಡೆ ಮುಂದುವರಿದ ಮಳೆ |  ಅಪಾರ ಪ್ರಮಾಣದ ಬೆಳೆ ಹಾನಿ | ಬರ-ಮಳೆ-ಬೆಲೆ ಕುಸಿತದದಿಂದ ತತ್ತರಿಸಿದ ರೈತರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ. 

Advertisement

ಸತತವಾಗಿ ಸುರಿಯುತ್ತಿರುವ  ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು.  ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ.  ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.  ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.

ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು   ರೈತ ಬಸವನಗೌಡ ಮನವಿ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

7 hours ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

7 hours ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

7 hours ago

ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ

ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…

15 hours ago

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ

ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು  ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…

1 day ago

ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…

1 day ago