ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಭತ್ತ, ಜೋಳ, ರಾಗಿ, ಈರುಳ್ಳಿ,ತೊಗರಿ ಕಟಾವಿಗೆ ಸಿದ್ಧವಾಗಿದ್ದು ಮಳೆಯಿಂದ ಸಂಕಷ್ಟವಾಗಿದೆ.
ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ನೂರಾರು ಹೆಕ್ಟೇರ್ ಬೆಳೆ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.ಕಟಾವಿಗೆ ಬಂದ ಈರುಳ್ಳಿ ಕೊಳೆಯುತ್ತಿದ್ದರೆ, ಸತತ ಮಳೆಯಿಂದ ಹತ್ತಿ ಕೂಡ ಹಾನಿಯಾಗಿದೆ. ಕಟಾವು ಮಾಡಿದ ಜೋಳ ಹಸಿರು ಮೊಳಕೆ ಹೊಡೆಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲಿರುವ 1835 ಹೆಕ್ಟೇರ್ ಪ್ರದೇಶದಲ್ಲಿರುವ ಕೃಷಿ ಬೆಳೆ ಹಾಗೂ 40 ಹೆಕ್ಟೇರ್ ಪ್ರದೇಶದಲ್ಲಿರುವ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ದಾವಣಗೆರೆ ಜಿಲ್ಲೆಯಾದ್ಯಂತ ಮಳೆಯ ಕಾರಣದಿಂದ ಕಟಾವಿಗೆ ಬಂದಿದ್ದ ಭತ್ತದ ಬೆಳೆ ನೆಲಕಚ್ಚಿದೆ. ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಹಾನಿಯ ಅಂದಾಜು ಪರಿಶೀಲನೆ ನಡೆಸಿದರು. ಮಂಡ್ಯ ಜಿಲ್ಲೆಯಲ್ಲಿ ಧಾರಾಕಾರ ಮಳೆ ಕೃಷಿ ಹಾನಿಯಾಗಿದೆ. ವಿಜಯನಗರ ಜಿಲ್ಲೆಯ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಾಶಯದಿಂದ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ. ಸುಮಾರು 90 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದರಿಂದ ಹಂಪಿಯ ಹಲವು ಸ್ಮಾರಕ ಮುಳುಗಡೆಯಾಗಿವೆ. ಸತತ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೊಪ್ಪಳ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈರುಳ್ಳಿ. ಹತ್ತಿ ಮೆಕ್ಕೆಜೋಳ ಮತ್ತು ತೊಗರಿ ಬೆಳೆದಿರುವ ರೈತರು ನಷ್ಟ ಅನುಭವಿಸುವಂತಾಗಿದೆ. ಹಾಸನದಲ್ಲಿ ಧಾರಾಕಾರ ಮಳೆಯಿಂದ ಕೃಷಿಗೆ ಹಾನಿಯಾಗಿದೆ.
ಹಿಂಗಾರು ಮಳೆಯಿಂದ ಜಿಲ್ಲೆಯಲ್ಲಿ ಹತ್ತಿ, ಈರುಳ್ಳಿ, ಮೆಕ್ಕೆ ಜೋಳ ಬೆಳೆಗಳಿಗೆ ಅಪಾರ ಹಾನಿಯಾಗಿದೆ. ಸರ್ಕಾರ ಮಧ್ಯ ಪ್ರವೇಶಿಸಿ ಪರಿಹಾರ ನೀಡಬೇಕು.ಒಂದೆಡೆ ಬೆಲೆ ಇಲ್ಲದೆ ಕಂಗಾಲಾಗಿರುವ ಪರಿಸ್ಥಿತಿಯಲ್ಲಿದ್ದ ರೈತರು ಮಳೆಯಿಂದ ಮತ್ತಷ್ಟು ಹಾನಿ ಅನುಭವಿಸಬೇಕಾಗಿದೆ. ಸರ್ಕಾರ ಕೂಡಲೇ ನೆರವಿಗೆ ಬರಬೇಕು ಎಂದು ರೈತ ಬಸವನಗೌಡ ಮನವಿ ಮಾಡಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…