ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭೂಕುಸಿತ ಉಂಟಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಭೂ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಿ, 439 ಅಪಾಯಕಾರಿ ಸ್ಥಳಗಳನ್ನು ಗುರುತಿಸಿದೆ. 2018ರಿಂದ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜನರು ಮುಂಜಾಗ್ರತ ಕ್ರಮವಾಗಿ ಮಳೆ ಬೀಳುವ ಸಮಯದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಾರೆ. ಮುಂದಿನ ಭಾರೀ ಮಳೆಗಳ ಬಗ್ಗೆ ಎಚ್ಚರಿಕೆ ಅಗತ್ಯವಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel