ಕಳೆದ 15 ದಿನಗಳಿಂದ ಕ್ಷೀಣಗೊಂಡಿರುವ ಮಳೆರಾಯ ಮತ್ತೊಮ್ಮೆ ಅಬ್ಬರಿಸುವ ಸಾಧ್ಯತೆ ಇದೆ. ಮುಂದಿನ ವಾರದ ನಂತರ ಅಂದರೆ ಆಗಸ್ಟ್ 25ರಿಂದ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಸೂಚನೆ ನೀಡಿದೆ.
ಭಾರೀ ಮಳೆಯಾಗುವ ಹಿನ್ನೆಲೆ ಪ್ರವಾಹ, ಭೂಕುಸಿತ ಉಂಟಾಗುವ ಸಾಧ್ಯತೆಗಳಿದ್ದು, ಜನರು ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಜಿಲ್ಲಾಡಳಿತಗಳು ವಿಪತ್ತು ನಿರ್ವಹಣೆಗೆ ಸಿದ್ಧವಾಗಿರುವಂತೆ ಸಂದೇಶ ರವಾನಿಸಲಾಗಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಭೂಕುಸಿತ ಉಂಟಾಗುತ್ತಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಭೂ ವಿಜ್ಞಾನಿಗಳ ತಂಡ ಅಧ್ಯಯನ ನಡೆಸಿ, 439 ಅಪಾಯಕಾರಿ ಸ್ಥಳಗಳನ್ನು ಗುರುತಿಸಿದೆ. 2018ರಿಂದ ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾಗದಲ್ಲಿ ಭೂಕುಸಿತ ಉಂಟಾಗಿತ್ತು. ಹೀಗಾಗಿ ಜನರು ಮುಂಜಾಗ್ರತ ಕ್ರಮವಾಗಿ ಮಳೆ ಬೀಳುವ ಸಮಯದಲ್ಲಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಾರೆ. ಮುಂದಿನ ಭಾರೀ ಮಳೆಗಳ ಬಗ್ಗೆ ಎಚ್ಚರಿಕೆ ಅಗತ್ಯವಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…