ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ಇಡೀ ದಿನ ಮಳೆಯಾಗಿತ್ತು. ಹಲವು ಕಡೆಗಳಲ್ಲಿ 60 ಮಿಮೀಗಿಂತ ಅಧಿಕ ಮಳೆಯಾಗಿತ್ತು. ಶನಿವಾರ ಮತ್ತೆ ಇಡೀ ದಿನ ಭರ್ಜರಿ ಮಳೆಯಾಗುತ್ತಿದೆ. ರಾತ್ರಿಯೂ ಮಳೆ ಸುರಿಯುತ್ತಿದೆ. ಈಗಾಗಲೇ ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನ ಘಟ್ಟ ಮುಳುಗಡೆಯ ಹಂತದಲ್ಲಿದೆ.
ಜೂನ್ ತಿಂಗಳು ಅಂದರೆ ಮಳೆಗಾಲ ಆರಂಭವಾದ ಬಳಿಕ ಮೊದಲ ಬಾರಿಗೆ ಧಾರಾಕಾರ ಮಳೆ ಕರಾವಳಿ ಜಿಲ್ಲೆಯಲ್ಲಿ ಕಾಣುತ್ತಿದೆ. ಎರಡು ದಿನಗಳಿಂದ ಸುರಿದ ಮಳೆಗೆ ಹೊಳೆ, ನದಿಗಳು ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲೂ ಭಾರೀ ಮಳೆಯಾಗುತ್ತಿದೆ. ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಸ್ನಾನಘಟ್ಟ ಮುಳುಗಡೆಯ ಹಂತದಲ್ಲಿದೆ. ರಾತ್ರಿಯೂ ಮಳೆಯಾಗುತ್ತಿದೆ. ಗ್ರಾಮೀಣ ಭಾಗಗಳಲ್ಲೂ ಹೊಳೆಗಳು ತುಂಬಿ ಹರಿಯುತ್ತಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಎರಡು ದಿನಗಳ ಉತ್ತಮ ಮಳೆಯಾಗಲಿದೆ.
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…