Advertisement
ಸುದ್ದಿಗಳು

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

Share

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.…… ಮುಂದೆ ಓದಿ……

ಈ ನಡುವೆ  ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಮುಂದುವರಿದಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಮೂರು ಜನರು ಮೃತಪಟ್ಟಿದ್ದಾರೆ. ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸರಬರಾಜು ಹಾಗೂ ವಾಹನ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಅನೇಕ ಕಡೆ ಸಣ್ಣ ಮಟ್ಟದ ಭೂಕುಸಿತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಕನಿಷ್ಠ 5 ಭೂಕುಸಿತಗಳು ಸಂಭವಿಸಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಅಣೆಕಟ್ಟುಗಳಲ್ಲಿ ನೀರಿನಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಆಗುತ್ತಿದ್ದು ಸಾಮಾನ್ಯ ಜನಜೀವನ ವ್ಯತ್ಯಯಗೊಂಡಿದೆ. ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.  ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಕಳಸ ತಾಲ್ಲೂಕಿನ ಮರಸಣಿಗೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರದ ರೆಂಬೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಕೊಪ್ಪ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಕೊಪ್ಪ, ಶೃಂಗೇರಿ ತಾಲೂಕಿನ ಹಲವೆಡೆ ಮರಗಳು ಬಿದ್ದು ವಿದ್ಯುತ್ ಕಂಬಳಿಗೆ ಹಾನಿ  ಉಂಟಾಗಿದೆ. ಜಿಲ್ಲೆಯ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಾವೇರಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮಳೆಯ ಜೊತೆ ಗಾಳಿ ಬೀಸುತ್ತಿದ್ದು, ಸುಮಾರು 75 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 hour ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

6 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

9 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago