ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಭಾಗಮಂಡಲದಲ್ಲಿ 19 ಸೆಂಟಿ ಮೀಟರ್ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಇದೇ 21 ರವರೆಗೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಡಾ. ಸಿ.ಎಸ್. ಪಾಟೀಲ್ ಮುನ್ಸೂಚನೆ ನೀಡಿದ್ದಾರೆ.…… ಮುಂದೆ ಓದಿ……
ಈ ನಡುವೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರ್ಷಧಾರೆ ಮುಂದುವರಿದಿದೆ. ಅದರಲ್ಲೂ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಮೂರು ಜನರು ಮೃತಪಟ್ಟಿದ್ದಾರೆ. ಮನೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸರಬರಾಜು ಹಾಗೂ ವಾಹನ ಸಂಚಾರಕ್ಕೆ ತೀವ್ರ ವ್ಯತ್ಯಯ ಉಂಟಾಗಿದೆ. ಧಾರಾಕಾರ ಮಳೆಯಿಂದಾಗಿ ಅನೇಕ ಕಡೆ ಸಣ್ಣ ಮಟ್ಟದ ಭೂಕುಸಿತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಲ್ಲಿ ಕನಿಷ್ಠ 5 ಭೂಕುಸಿತಗಳು ಸಂಭವಿಸಿರುವ ಕುರಿತು ವರದಿಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಅಣೆಕಟ್ಟುಗಳಲ್ಲಿ ನೀರಿನಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಕೊಡಗು ಜಿಲ್ಲೆಯ ಬಹುತೇಕ ಕಡೆ ಧಾರಾಕಾರ ಮಳೆ ಆಗುತ್ತಿದ್ದು ಸಾಮಾನ್ಯ ಜನಜೀವನ ವ್ಯತ್ಯಯಗೊಂಡಿದೆ. ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಗಾಳಿಯಿಂದಾಗಿ ಅಲ್ಲಲ್ಲಿ ಮರಗಳು ವಿದ್ಯುತ್ ತಂತಿ ಮೇಲೆ ಬಿದ್ದು ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಮುಂದುವರೆದಿದೆ. ಕಳಸ ತಾಲ್ಲೂಕಿನ ಮರಸಣಿಗೆ ಗ್ರಾಮದಲ್ಲಿ ಮನೆಯೊಂದರ ಮೇಲೆ ಮರದ ರೆಂಬೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಕೊಪ್ಪ ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಮಳೆಯಿಂದ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಕೊಪ್ಪ, ಶೃಂಗೇರಿ ತಾಲೂಕಿನ ಹಲವೆಡೆ ಮರಗಳು ಬಿದ್ದು ವಿದ್ಯುತ್ ಕಂಬಳಿಗೆ ಹಾನಿ ಉಂಟಾಗಿದೆ. ಜಿಲ್ಲೆಯ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಾವೇರಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದೆ. ಮಳೆಯ ಜೊತೆ ಗಾಳಿ ಬೀಸುತ್ತಿದ್ದು, ಸುಮಾರು 75 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ.
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…
CAMPCO ಹಾಗೂ ಕೇಂದ್ರ ಸರ್ಕಾರದ ಪ್ರಕರಣಕ್ಕೆ ಸಂಬಂಧಿಸಿ 2026 ರ ಮೇ 26…
ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…
ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…