Advertisement
ಸುದ್ದಿಗಳು

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ

Share

ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ ಘಟನೆಗಳಿಂದಾಗಿ ರಾಜ್ಯದ ಹಲವಾರು ಭಾಗಗಳಲ್ಲಿ ಜನ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ. ಇದೇ  9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಸಿರ್ಮೌರ್ ಜಿಲ್ಲೆಯ ಪಚ್ಚಾದ್‌ನಲ್ಲಿ ಅತಿ ಹೆಚ್ಚು 133 ಮಿಲಿಮೀಟರ್ ಮಳೆಯಾಗಿದೆ. ಇದಲ್ಲದೆ, ಹಮೀರ್‌ಪುರ ಜಿಲ್ಲೆಯ ಬರ್ಸರ್‌ನಲ್ಲಿ 92 ಮಿಲಿಮೀಟರ್, ರಾಜಧಾನಿ ಶಿಮ್ಲಾ ಬಳಿಯ ಜುಬ್ಬರ್‌ಹಟ್ಟಿಯಲ್ಲಿ 59 ಮತ್ತು ಉನಾ ಜಿಲ್ಲೆಯಲ್ಲಿ 55 ಮಿಲಿಮೀಟರ್ ಮಳೆಯಾಗಿದೆ. ಈ ನಡವೆ, ರಾಜ್ಯಾದ್ಯಂತ 246 ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. 404 ವಿದ್ಯುತ್ ಪರಿವರ್ತಕಗಳು ಮತ್ತು 784 ಕುಡಿಯುವ ನೀರು ಸರಬರಾಜು ಯೋಜನೆಗಳು ಬಾಧಿತವಾಗಿದ್ದು, ಸಾರ್ವಜನಿಕರಿಗೆ ನೀರು ಮತ್ತು ವಿದ್ಯುತ್ ಕೊರತೆ ಉಂಟಾಗಿದೆ. ಇಲ್ಲಿಯವರೆಗೆ, ಮಳೆ ಸಂಬಂಧಿತ ಘಟನೆಗಳಲ್ಲಿ 69 ಜನರು ಪ್ರಾಣ ಕಳೆದುಕೊಂಡಿದ್ದಾರೆ, 110 ಜನರು ಗಾಯಗೊಂಡಿದ್ದಾರೆ ಮತ್ತು 37 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಜುಲೈ 9 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜನರು ನದಿಗಳು ಮತ್ತು ತೊರೆಗಳಿಂದ ದೂರವಿರಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಮತ್ತು ಆಡಳಿತವು ನೀಡಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹವಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

6 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

13 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago