Advertisement
ಸುದ್ದಿಗಳು

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ

Share

ಹಿಮಾಚಲ ಪ್ರದೇಶದಲ್ಲಿ ಮಾನ್ಸೂನ್ ಆಗಮನದ ನಂತರ, ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಮತ್ತು ಭೂಕುಸಿತದ ಘಟನೆಗಳಿಂದಾಗಿ ರಾಜ್ಯದ ಹಲವಾರು ಭಾಗಗಳಲ್ಲಿ ಜನ ಜೀವನದ ಮೇಲೆ ತೀವ್ರ ಪರಿಣಾಮ ಬೀರಿವೆ. ಇದೇ  9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಸಿರ್ಮೌರ್ ಜಿಲ್ಲೆಯ ಪಚ್ಚಾದ್‌ನಲ್ಲಿ ಅತಿ ಹೆಚ್ಚು 133 ಮಿಲಿಮೀಟರ್ ಮಳೆಯಾಗಿದೆ. ಇದಲ್ಲದೆ, ಹಮೀರ್‌ಪುರ ಜಿಲ್ಲೆಯ ಬರ್ಸರ್‌ನಲ್ಲಿ 92 ಮಿಲಿಮೀಟರ್, ರಾಜಧಾನಿ ಶಿಮ್ಲಾ ಬಳಿಯ ಜುಬ್ಬರ್‌ಹಟ್ಟಿಯಲ್ಲಿ 59 ಮತ್ತು ಉನಾ ಜಿಲ್ಲೆಯಲ್ಲಿ 55 ಮಿಲಿಮೀಟರ್ ಮಳೆಯಾಗಿದೆ. ಈ ನಡವೆ, ರಾಜ್ಯಾದ್ಯಂತ 246 ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. 404 ವಿದ್ಯುತ್ ಪರಿವರ್ತಕಗಳು ಮತ್ತು 784 ಕುಡಿಯುವ ನೀರು ಸರಬರಾಜು ಯೋಜನೆಗಳು ಬಾಧಿತವಾಗಿದ್ದು, ಸಾರ್ವಜನಿಕರಿಗೆ ನೀರು ಮತ್ತು ವಿದ್ಯುತ್ ಕೊರತೆ ಉಂಟಾಗಿದೆ. ಇಲ್ಲಿಯವರೆಗೆ, ಮಳೆ ಸಂಬಂಧಿತ ಘಟನೆಗಳಲ್ಲಿ 69 ಜನರು ಪ್ರಾಣ ಕಳೆದುಕೊಂಡಿದ್ದಾರೆ, 110 ಜನರು ಗಾಯಗೊಂಡಿದ್ದಾರೆ ಮತ್ತು 37 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಜುಲೈ 9 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜನರು ನದಿಗಳು ಮತ್ತು ತೊರೆಗಳಿಂದ ದೂರವಿರಲು, ಅನಗತ್ಯ ಪ್ರಯಾಣವನ್ನು ತಪ್ಪಿಸಲು ಮತ್ತು ಆಡಳಿತವು ನೀಡಿದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಹವಮಾನ ಇಲಾಖೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

3 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

13 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

13 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

18 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

18 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

22 hours ago