ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…