ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…