ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…