ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…