ಸುಳ್ಯ ತಾಲೂಕಿನಲ್ಲಿ ಮತ್ತೆ ಧಾರಾಕಾರ ಮಳೆ ಮುಂದುವರಿದಿದೆ. ಗ್ರಾಮೀಣ ಭಾಗಗಳು ತತ್ತರಗೊಂಡಿವೆ. ಹಲವು ಹೊಳೆ, ನದಿಗಳು ಉಕ್ಕಿ ಹರಿಯುತ್ತಿರುವ ಕಾರಣದಿಂದ ಸೇತುವೆಗಳು ಬ್ಲಾಕ್ ಆಗಿವೆ. ಸಂಚಾರ ಸಂಕಷ್ಟದಲ್ಲಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ, ಬಾಳುಗೋಡು ಮೊದಲಾದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆ ಮುಂದುವರಿದಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆ ಸೇರಿದಂತೆ ಗ್ರಾಮೀಣ ರಸ್ತೆಗಳಲ್ಲೂ ನೀರು ತುಂಬಿ ಸಂಚಾರ ಸಂಕಷ್ಟದಲ್ಲಿದೆ. ಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…