Advertisement
ಸುದ್ದಿಗಳು

Karnataka Weather | 21-06-2024 | ಇಂದು ಸಾಮಾನ್ಯ ಮಳೆ | ಜೂ. 22 ರಿಂದ 24 ವರೆಗೆ ಉತ್ತಮ ಮಳೆ |

Share

22.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮಧ್ಯಾಹ್ನ ನಂತರ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಕರಾವಳಿ ತೀರ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದ್ದು ಉಳಿದ ಭಾಗಗಳಲ್ಲಿ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ.

ಕೊಡಗು ಅಲ್ಲಲ್ಲಿ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ, ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಮೈಸೂರು ಮತ್ತು ಬೆಂಗಳೂರು ಗ್ರಾಮಾಂತರ ಹಾಗೂ ನಗರ ಜಿಲ್ಲೆಗಳ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 22 ರಿಂದ 24ರ ತನಕ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ನಂತರ ಜೂನ್ 28ರ ತನಕವೂ ಉತ್ತಮ ಮಳೆಯ ಮುನ್ಸೂಚನೆ ಇದೆ. ಜೂನ್ 29ರಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ರಾಜ್ಯದ ಒಳನಾಡು ಭಾಗಗಳಲ್ಲಿಯೂ ಜೂನ್ 28ರ ತನಕ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

– Weather forecast predicts heavy rain from June 22 to 24

– Certain regions will experience periods of heavy rain

– Importance of staying informed and prepared for potential severe weather events

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago