ಸುಳ್ಯ , ಪುತ್ತೂರು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳ ಮಳೆಗೆ ನದಿಗಳು ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆಯ ಪಂಜದ ಹೊಳೆ ತುಂಬಿ ಹರಿದು ಸೇತುವೆ ಮೇಲೆ ನೀರು ಹರಿಯುವ ಕಾರಣ ವಾಹನ ಸಂಚಾರ ಸ್ಥಗಿತವಾಗಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಮುಳುಗಿರುವ ಸುಬ್ರಹ್ಮಣ್ಯ-ಪಂಜ ರಸ್ತೆಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ಸುಳ್ಯದ ಸಂಪಾಜೆ, ಚೆಂಬು ಪ್ರದೇಶದಲ್ಲೂ ಭಾರೀ ಮಳೆಯಾಗಿದ್ದು, ನಿನ್ನೆ ರಾತ್ರಿ ರಸ್ತೆಗೆ ಮರ ಬಿದ್ದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸದ್ಯ ವಾಹನ ಸಂಚಾರಕ್ಕೆ ಅನುವು ಇದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದ ರಸ್ತೆಗಳು ಕುಸಿತವಾಗುವ ಆತಂಕ ಇದೆ. ಇಂದೂ ಕೂಡಾ ನಿರಂತರ ಮಳೆಯಾದರೆ ಕುಸಿತದ ಆತಂಕ ಇದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಹರಿದು ನೀರು ಬರುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಎಚ್ಚರಿಕೆ ನೀಡುತ್ತಿದ್ದಾರೆ.ಕುಮಾರಧಾರ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ.
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…