ಸುಳ್ಯ , ಪುತ್ತೂರು ಸೇರಿದಂತೆ ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳ ಮಳೆಗೆ ನದಿಗಳು ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆಯ ಪಂಜದ ಹೊಳೆ ತುಂಬಿ ಹರಿದು ಸೇತುವೆ ಮೇಲೆ ನೀರು ಹರಿಯುವ ಕಾರಣ ವಾಹನ ಸಂಚಾರ ಸ್ಥಗಿತವಾಗಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಮುಳುಗಿರುವ ಸುಬ್ರಹ್ಮಣ್ಯ-ಪಂಜ ರಸ್ತೆಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.
ಸುಳ್ಯದ ಸಂಪಾಜೆ, ಚೆಂಬು ಪ್ರದೇಶದಲ್ಲೂ ಭಾರೀ ಮಳೆಯಾಗಿದ್ದು, ನಿನ್ನೆ ರಾತ್ರಿ ರಸ್ತೆಗೆ ಮರ ಬಿದ್ದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸದ್ಯ ವಾಹನ ಸಂಚಾರಕ್ಕೆ ಅನುವು ಇದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದ ರಸ್ತೆಗಳು ಕುಸಿತವಾಗುವ ಆತಂಕ ಇದೆ. ಇಂದೂ ಕೂಡಾ ನಿರಂತರ ಮಳೆಯಾದರೆ ಕುಸಿತದ ಆತಂಕ ಇದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಹರಿದು ನೀರು ಬರುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಎಚ್ಚರಿಕೆ ನೀಡುತ್ತಿದ್ದಾರೆ.ಕುಮಾರಧಾರ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ.
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…