Advertisement
MIRROR FOCUS

#HeavyRain | ನಿರಂತರ ಮಳೆಗೆ ತುಂಬಿ ಹರಿಯುವ ನದಿಗಳು | ಮುಂದುವರಿದ ಭಾರೀ ಮಳೆ | ಸೇತುವೆಗಳು ಬ್ಲಾಕ್‌ – ಸಂಚಾರಕ್ಕೆ ಅಡ್ಡಿ | ಕುಮಾರಧಾರಾ ಸ್ನಾನ ಘಟ್ಟ ಮತ್ತೆ ಮುಳುಗಡೆ |

Share

ಸುಳ್ಯ , ಪುತ್ತೂರು ಸೇರಿದಂತೆ ಮಲೆನಾಡು ಭಾಗಗಳಲ್ಲಿ  ಭಾರೀ ಮಳೆ ಮುಂದುವರಿದಿದೆ. ಎರಡು ದಿನಗಳ ಮಳೆಗೆ ನದಿಗಳು ತುಂಬಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು ಸಂಪರ್ಕ ರಸ್ತೆಯ ಪಂಜದ ಹೊಳೆ ತುಂಬಿ ಹರಿದು ಸೇತುವೆ ಮೇಲೆ ನೀರು ಹರಿಯುವ ಕಾರಣ ವಾಹನ ಸಂಚಾರ ಸ್ಥಗಿತವಾಗಿದೆ. ಘಟ್ಟ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.

ಮುಳುಗಿರುವ ಸುಬ್ರಹ್ಮಣ್ಯ-ಪಂಜ ರಸ್ತೆಸುಳ್ಯದ ಕೊಲ್ಲಮೊಗ್ರ , ಹರಿಹರ ಪ್ರದೇಶಗಳಲ್ಲೂ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಹೊಳೆ ತುಂಬಿ ಹರಿಯುತ್ತಿದೆ. ಕಳೆದ ವರ್ಷದ ಭಾರೀ ಮಳೆಯ ಕಾರಣದಿಂದ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿತ್ತು. ಇದೀಗ ಭಾರೀ ಮಳೆ ಎರಡು ದಿನಗಳಿಂದ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಆತಂಕ ಉಂಟಾಗಿದೆ.

ಸುಳ್ಯದ ಸಂಪಾಜೆ, ಚೆಂಬು ಪ್ರದೇಶದಲ್ಲೂ ಭಾರೀ ಮಳೆಯಾಗಿದ್ದು, ನಿನ್ನೆ ರಾತ್ರಿ ರಸ್ತೆಗೆ ಮರ ಬಿದ್ದ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಸದ್ಯ ವಾಹನ ಸಂಚಾರಕ್ಕೆ ಅನುವು ಇದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದ ರಸ್ತೆಗಳು ಕುಸಿತವಾಗುವ ಆತಂಕ ಇದೆ. ಇಂದೂ ಕೂಡಾ ನಿರಂತರ ಮಳೆಯಾದರೆ ಕುಸಿತದ ಆತಂಕ ಇದೆ.

ಕುಮಾರಧಾರಾ ಸ್ನಾನಘಟ್ಟ ಮುಳುಗಡೆ | Photo Credit : Shiva Bhat

ಕುಕ್ಕೆ ಸುಬ್ರಹ್ಮಣ್ಯದಲ್ಲೂ ಭಾರೀ ಮಳೆಯಾಗುತ್ತಿದೆ. ಘಟ್ಟ ಪ್ರದೇಶದಿಂದ ಭಾರೀ ಪ್ರಮಾಣದಲ್ಲಿ ಹರಿದು  ನೀರು ಬರುತ್ತಿರುವ  ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ನದಿ ಬದಿಗೆ ಹೋಗದಂತೆ ದೇವಾಲಯದ ಭಕ್ತರಿಗೆ ಸೂಚನೆ ನೀಡಲಾಗಿದೆ. ಪೊಲೀಸರು, ಗೃಹರಕ್ಷಕ ದಳದಿಂದ ಸ್ನಾನ ಘಟ್ಟ ಬಳಿ ಎಚ್ಚರಿಕೆ ನೀಡುತ್ತಿದ್ದಾರೆ.ಕುಮಾರಧಾರ ನೀರು ಹೆಚ್ಚಳವಾಗಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿ ಬಂದ್ ಆಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 hour ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago