#HeavyRain | ಹಿಮಾಚಲದಲ್ಲಿ ಭಾರೀ ಮಳೆ, ಹಿಮಪಾತ | 20 ಮಂದಿ ಬಲಿ : ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್ |

July 11, 2023
12:18 PM
ಭಾರಿ ಮಳೆ, ಹಿಮಪಾತಕ್ಕೆ ಉತ್ತರ ಭಾರತ ತತ್ತರಗೊಂಡಿದೆ. 20 ಮಂದಿ ಪ್ರವಾಹಕ್ಕೆ ಬಲಿಯಾದ ಬಗ್ಗೆ ವರದಿಯಾಗಿದೆ. ಲಡಾಕ್ ನಲ್ಲಿ ಬೆಂಗಳೂರಿನ ವೈದ್ಯರ ತಂಡ ಸಿಕ್ಕಿಹಾಕಿಕೊಂಡಿದೆ.

ಉತ್ತರಭಾರತದಲ್ಲಿ ಸುರಿಯುತ್ತಿರುವ  ಭಾರೀ ಮಳೆ ಹಾಗೂ ಹಿಮಪಾತ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಹಿಮಾಚಲ ಪ್ರದೇಶದಲ್ಲಿ #HimachalPradesh ಪ್ರವಾಹದ# Flood ಸ್ಥಿತಿ ಉಂಟಾಗಿದೆ. ಇದೇ ವೇಳೆ ಲಡಾಕ್‌ #Ladakh ನಲ್ಲಿ ಬೆಂಗಳೂರಿಗರು #Bengaluru ಸಿಲುಕಿಕೊಂಡಿದ್ದಾರೆ. ಲಡಾಕ್‌ನ ರಾಷ್ಟ್ರೀಯ ಹೆದ್ದಾರಿಗಳು ಭೂ ಕುಸಿತವಾಗಿದ್ದು, ಕನ್ನಡಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಉನಾ, ಹಮೀರ್‌ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ. 

ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ.  ಲಡಾಕ್‌ನಲ್ಲಿ ವಿಮಾನಗಳ ಹಾರಾಟವೂ ರದ್ದಾಗಿದೆ. ವಿಮಾನ ಸಿಗದೆ ಕಳೆದ ಎರಡು ದಿನಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಭಾರೀ ಮಳೆ, ದಟ್ಟ ಮಂಜು, ವಿಪರೀತ ಚಳಿಯಲ್ಲಿ ನಡುಗುತ್ತಲೇ ಬೆಂಗಳೂರಿಗರು ವೀಡಿಯೋ ಹಂಚಿಕೊಂಡಿದ್ದಾರೆ. ಹೇಗಾದ್ರೂ ಮಾಡಿ ಬೆಂಗಳೂರಿಗೆ ಕರೆಸಿಕೊಳ್ಳಿ. ತುಂಬಾ ಕಷ್ಟ ಆಗ್ತಿದೆ. ದಯವಿಟ್ಟು ಬೆಂಗಳೂರಿಗೆ ತಲುಪಿಸುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಜನರ ದಂಡೇ ನೆರೆದಿದೆ. ನಿರಂತರ ಮಳೆಗೆ ಆರೋಗ್ಯ ಕೈಕೊಡ್ತಿದೆ. ಇಲ್ಲಿ ಇನ್ನೂ ಸುಮಾರು ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನ ಬೆಂಗಳೂರು ಮೂಲದ ವೈದ್ಯರು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror