Advertisement
ಪ್ರಮುಖ

#HeavyRain | ಹಿಮಾಚಲದಲ್ಲಿ ಭಾರೀ ಮಳೆ, ಹಿಮಪಾತ | 20 ಮಂದಿ ಬಲಿ : ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್ |

Share

ಉತ್ತರಭಾರತದಲ್ಲಿ ಸುರಿಯುತ್ತಿರುವ  ಭಾರೀ ಮಳೆ ಹಾಗೂ ಹಿಮಪಾತ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಹಿಮಾಚಲ ಪ್ರದೇಶದಲ್ಲಿ #HimachalPradesh ಪ್ರವಾಹದ# Flood ಸ್ಥಿತಿ ಉಂಟಾಗಿದೆ. ಇದೇ ವೇಳೆ ಲಡಾಕ್‌ #Ladakh ನಲ್ಲಿ ಬೆಂಗಳೂರಿಗರು #Bengaluru ಸಿಲುಕಿಕೊಂಡಿದ್ದಾರೆ. ಲಡಾಕ್‌ನ ರಾಷ್ಟ್ರೀಯ ಹೆದ್ದಾರಿಗಳು ಭೂ ಕುಸಿತವಾಗಿದ್ದು, ಕನ್ನಡಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ.

ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಉನಾ, ಹಮೀರ್‌ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ. 

ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ.  ಲಡಾಕ್‌ನಲ್ಲಿ ವಿಮಾನಗಳ ಹಾರಾಟವೂ ರದ್ದಾಗಿದೆ. ವಿಮಾನ ಸಿಗದೆ ಕಳೆದ ಎರಡು ದಿನಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಭಾರೀ ಮಳೆ, ದಟ್ಟ ಮಂಜು, ವಿಪರೀತ ಚಳಿಯಲ್ಲಿ ನಡುಗುತ್ತಲೇ ಬೆಂಗಳೂರಿಗರು ವೀಡಿಯೋ ಹಂಚಿಕೊಂಡಿದ್ದಾರೆ. ಹೇಗಾದ್ರೂ ಮಾಡಿ ಬೆಂಗಳೂರಿಗೆ ಕರೆಸಿಕೊಳ್ಳಿ. ತುಂಬಾ ಕಷ್ಟ ಆಗ್ತಿದೆ. ದಯವಿಟ್ಟು ಬೆಂಗಳೂರಿಗೆ ತಲುಪಿಸುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಜನರ ದಂಡೇ ನೆರೆದಿದೆ. ನಿರಂತರ ಮಳೆಗೆ ಆರೋಗ್ಯ ಕೈಕೊಡ್ತಿದೆ. ಇಲ್ಲಿ ಇನ್ನೂ ಸುಮಾರು ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನ ಬೆಂಗಳೂರು ಮೂಲದ ವೈದ್ಯರು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

20 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago