Advertisement
ಪ್ರಮುಖ

#HeavyRain | ಹಿಮಾಚಲದಲ್ಲಿ ಭಾರೀ ಮಳೆ, ಹಿಮಪಾತ | 20 ಮಂದಿ ಬಲಿ : ಲಡಾಕ್‌ನಲ್ಲಿ ಬೆಂಗಳೂರಿಗರು ಲಾಕ್ |

Share

ಉತ್ತರಭಾರತದಲ್ಲಿ ಸುರಿಯುತ್ತಿರುವ  ಭಾರೀ ಮಳೆ ಹಾಗೂ ಹಿಮಪಾತ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ಹಿಮಾಚಲ ಪ್ರದೇಶದಲ್ಲಿ #HimachalPradesh ಪ್ರವಾಹದ# Flood ಸ್ಥಿತಿ ಉಂಟಾಗಿದೆ. ಇದೇ ವೇಳೆ ಲಡಾಕ್‌ #Ladakh ನಲ್ಲಿ ಬೆಂಗಳೂರಿಗರು #Bengaluru ಸಿಲುಕಿಕೊಂಡಿದ್ದಾರೆ. ಲಡಾಕ್‌ನ ರಾಷ್ಟ್ರೀಯ ಹೆದ್ದಾರಿಗಳು ಭೂ ಕುಸಿತವಾಗಿದ್ದು, ಕನ್ನಡಿಗರು ಅತಂತ್ರ ಸ್ಥಿತಿಯಲ್ಲಿದ್ದಾರೆ.

Advertisement

ಧುಮ್ಮಿಕ್ಕುತ್ತಿರುವ ನದಿಗಳಲ್ಲಿ ಸೇತುವೆ, ಮನೆಗಳು ಕೊಚ್ಚಿಕೊಂಡು ಹೋಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೋಲನ್, ಶಿಮ್ಲಾ, ಸಿರ್ಮೌರ್, ಕುಲು, ಮಂಡಿ, ಕಿನ್ನೌರ್ ಮತ್ತು ಲಾಹೌಲ್‌ನಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಇನ್ನುಳಿದಂತೆ ಉನಾ, ಹಮೀರ್‌ಪುರ, ಕಾಂಗ್ರಾ ಹಾಗೂ ಚಂಬಾದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಾತ್ರವಲ್ಲದೇ ಮಂಡಿ, ಕಿನ್ನೌರ್ ಹಾಗೂ ಲಾಹೌಲ್ ಭಾಗದಲ್ಲಿ ಹಠಾತ್ ಪ್ರವಾಹ ಎಚ್ಚರಿಕೆಯನ್ನು ನೀಡಲಾಗಿದೆ. 

ಹಿಮಾಚಲದಲ್ಲಿ ಭಾರೀ ಮಳೆಗೆ ಈಗಾಗಲೇ 12ಕ್ಕೂ ಹೆಚ್ಚು ಪ್ರಮುಖ ಸೇತುವೆಗಳೇ ಹಾನಿಗೊಳಗಾಗಿವೆ. ಭೂಕುಸಿತ, ವಿದ್ಯುತ್ ವ್ಯತ್ಯಯ, ರಸ್ತೆಗಳಿಗೂ ಹಾನಿಯಾಗಿದೆ. ರಾಜ್ಯದಲ್ಲಿ ಕಳೆದ 48 ಗಂಟೆಗಳಲ್ಲಿ ವರುಣನ ಅಬ್ಬರಕ್ಕೆ 20 ಮಂದಿ ಬಲಿಯಾಗಿದ್ದಾರೆ.  ಲಡಾಕ್‌ನಲ್ಲಿ ವಿಮಾನಗಳ ಹಾರಾಟವೂ ರದ್ದಾಗಿದೆ. ವಿಮಾನ ಸಿಗದೆ ಕಳೆದ ಎರಡು ದಿನಗಳಿಂದ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೂಲದ ವೈದ್ಯರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಭಾರೀ ಮಳೆ, ದಟ್ಟ ಮಂಜು, ವಿಪರೀತ ಚಳಿಯಲ್ಲಿ ನಡುಗುತ್ತಲೇ ಬೆಂಗಳೂರಿಗರು ವೀಡಿಯೋ ಹಂಚಿಕೊಂಡಿದ್ದಾರೆ. ಹೇಗಾದ್ರೂ ಮಾಡಿ ಬೆಂಗಳೂರಿಗೆ ಕರೆಸಿಕೊಳ್ಳಿ. ತುಂಬಾ ಕಷ್ಟ ಆಗ್ತಿದೆ. ದಯವಿಟ್ಟು ಬೆಂಗಳೂರಿಗೆ ತಲುಪಿಸುವ ವ್ಯವಸ್ಥೆ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ವಿಮಾನಗಳ ಹಾರಾಟ ಸ್ಥಗಿತಗೊಂಡ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಜನರ ದಂಡೇ ನೆರೆದಿದೆ. ನಿರಂತರ ಮಳೆಗೆ ಆರೋಗ್ಯ ಕೈಕೊಡ್ತಿದೆ. ಇಲ್ಲಿ ಇನ್ನೂ ಸುಮಾರು ಕನ್ನಡಿಗರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಲ್ಲಿನ ಪರಿಸ್ಥಿತಿಯನ್ನ ಬೆಂಗಳೂರು ಮೂಲದ ವೈದ್ಯರು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

5 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

12 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

12 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

1 day ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

1 day ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

1 day ago