ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

February 21, 2026
8:36 PM

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು, ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ತಂಪಿನ ಅನುಭವ ನೀಡಿದೆ. ಸುಬ್ರಹ್ಮಣ್ಯ, ಬೆಳ್ತಂಗಡಿ ಹಾಗೂ ಕಾರ್ಕಳ ಭಾಗಗಳಲ್ಲಿ ಗುಡುಗು-ಮಿಂಚಿನೊಂದಿಗೆ ಉತ್ತಮ ಮಳೆ ಸುರಿದಿದೆ.

Advertisement

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಸಂಜೆ ಸುರಿದ ಮಳೆ ಈ ವರ್ಷದ ಮೊದಲ ಗಮನಾರ್ಹ ಮಳೆಯಾಗಿ ದಾಖಲಾಗಿದೆ. ಬಿಸಿಗಾಳಿಯಿಂದ ಬಳಲುತ್ತಿದ್ದ ಪರಿಸರಕ್ಕೆ ಈ ಮಳೆ ತಂಪು ತಂದಿದೆ. ಆದರೆ ಅಚಾನಕ್ ಸುರಿದ ಮಳೆಯಿಂದ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಒದ್ದೆಯಾಗಿದ್ದು, ಕೆಲವು ರೈತರಿಗೆ ಸಂಕಷ್ಟ ಉಂಟಾಗಿದೆ.

ಮಳೆಯ ಪ್ರಮಾಣದ ವಿವರ ಪ್ರಕಾರ, ಸುಬ್ರಹ್ಮಣ್ಯದ ಕಲ್ಲಾಜೆಯಲ್ಲಿ 42 ಮಿಲಿಮೀಟರ್ ಮಳೆಯಾದರೆ, ಮರ್ಕಂಜದಲ್ಲೂ 40 ಮಿಮೀ ಮಳೆಯಾಗಿದೆ. ಸುಳ್ಯದಲ್ಲಿ 9 ಮಿಮೀ, ಗುತ್ತಿಗಾರಿನಲ್ಲಿ 6 ಮಿಮೀ ಮತ್ತು ಸುಳ್ಯ ತಾಲೂಕಿನ ಹರಿಹರ ಗ್ರಾಮದಲ್ಲಿ 25 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ. ಕೆಲವೆಡೆ ಭಾರೀ ಗಾಳಿ ಬೀಸಿದ ಪರಿಣಾಮ ಮರಗಳು ಉರುಳಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸುಬ್ರಹ್ಮಣ್ಯ, ಬಿಳಿನೆಲೆ, ಮರ್ಧಾಳ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆಯಾದರೆ, ಬೆಳ್ತಂಗಡಿ ತಾಲೂಕಿನ ನಾರಾವಿ ಮತ್ತು ಅಳದಂಗಡಿ ಭಾಗಗಳಲ್ಲೂ ಮಳೆ ಸುರಿದಿದೆ.

ಇನ್ನೊಂದೆಡೆ, ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿ ಭಾಗದಲ್ಲಿ ಈ ವರ್ಷದ ಮೊದಲ ಮಳೆ ದಾಖಲಾಗಿದೆ. ಅಕಾಲಿಕ ಮಳೆಯು ಒಂದು ಕಡೆ ಬಿಸಿಗಾಳಿಯಿಂದ ಪರಿಹಾರ ನೀಡಿದರೂ, ಅಡಿಕೆ ಒಣಗಿಸುವ ಪ್ರಕ್ರಿಯೆಯಲ್ಲಿದ್ದ ರೈತರಿಗೆ ನಷ್ಟದ ಆತಂಕ ಉಂಟುಮಾಡಿದೆ.

ಗುತ್ತಿಗಾರು ಬಳಿಯ ಕಲ್ಲಾಜೆಯಲ್ಲಿ ಮಳೆಯ ಅಬ್ಬರ : Photo Credit – ಶ್ಯಾಮ್‌ ಪ್ರಸಾದ್ ಕಲ್ಲಾಜೆ

Sudden heavy rain lashed parts of Dakshina Kannada and Udupi districts, with Subrahmanya and Markanja recording 40 mm rainfall. While the showers brought relief from intense heat, arecanut farmers faced concern as drying nuts were soaked. Strong winds also caused tree falls and power disruptions in some areas.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ
ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ
February 21, 2026
9:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror