#KarnatakaWeather | ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಹಾಮಳೆಯ ಎಚ್ಚರಿಕೆ | ಬೆಂಗಳೂರಿಗೆ 2-3 ದಿನ ಎಲ್ಲೋ ಅಲರ್ಟ್ ಘೋಷಣೆ |

June 16, 2023
9:27 AM

ಮುಂಗಾರು  ಪ್ರವೇಶ ಆದರೂ  ಕಳೆದ ಹತ್ತು ದಿನಗಳಿಂದ ವರುಣ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದಾನೆ. ನಿರೀಕ್ಷೆಯಂತೆ ರಾಜ್ಯದ ಬಹುತೇಕ ಕಡೆ ಮಳೆ ಸುರಿದಿಲ್ಲ. ಇದೀಗ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ #RainAlert ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಎಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದೇಶದಲ್ಲಿ ಮುಂದಿನ 4 ವಾರ ಮುಂಗಾರು ದುರ್ಬಲಗೊಳ್ಳಬಹುದು ಎಂದು ಮೂರು ದಿನಗಳ ಹಿಂದಷ್ಟೇ ಸ್ಕೈಮೆಟ್‌ ಅಂದಾಜಿಸಿತ್ತು. ಆದರೆ  ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಸೂಚನೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror