ಮುಂಗಾರು ಪ್ರವೇಶ ಆದರೂ ಕಳೆದ ಹತ್ತು ದಿನಗಳಿಂದ ವರುಣ ಕಣ್ಣಾ ಮುಚ್ಚಾಲೆ ಆಟ ಆಡುತ್ತಿದ್ದಾನೆ. ನಿರೀಕ್ಷೆಯಂತೆ ರಾಜ್ಯದ ಬಹುತೇಕ ಕಡೆ ಮಳೆ ಸುರಿದಿಲ್ಲ. ಇದೀಗ ಹವಾಮಾನ ಇಲಾಖೆ ಮತ್ತೆ ಎಚ್ಚರಿಕೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್ 20ರಿಂದ ಭಾರಿ ಮಳೆ #RainAlert ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ದೇಶದಲ್ಲಿ ಮುಂದಿನ 4 ವಾರ ಮುಂಗಾರು ದುರ್ಬಲಗೊಳ್ಳಬಹುದು ಎಂದು ಮೂರು ದಿನಗಳ ಹಿಂದಷ್ಟೇ ಸ್ಕೈಮೆಟ್ ಅಂದಾಜಿಸಿತ್ತು. ಆದರೆ ಭಾರತೀಯ ಹವಾಮಾನ ಇಲಾಖೆ (IMD) ಮಳೆಯ ಸೂಚನೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿರಲಿದೆ. ಕರ್ನಾಟಕ ಸೇರಿ ದೇಶದ ಬಹುತೇಕ ಭಾಗಗಳಲ್ಲಿ ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು IMD ತಿಳಿಸಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 40-50 ಕಿ.ಮೀ ವೇಗದಲ್ಲಿರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…