ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

May 12, 2024
11:10 AM

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ ಧಗೆ ದಿನೇ ದಿನೇ ಏರತೊಡಗಿತ್ತು. ಮಳೆಗಾಗಿ(Rain) ಎಲ್ಲರೂ ವರುಣ ದೇವರನ್ನು ಪ್ರಾರ್ಥಿಸುವಂತಾಗಿತ್ತು. ಆದರೆ ಈಗ ರಾಜ್ಯದ ಚಾಮರಾಜನಗರ(Chamarajanagara), ಮಂಗಳೂರು(Mangaluru), ಹಾಸನ (Hassan), ಹಾವೇರಿ(Haveri) ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಪರಿಣಾಮದಿಂದ ರೈತರು(Farmer) ಒಂದೆಡೆ ಸಂಭ್ರಮ ಪಟ್ಟರೆ ಇನ್ನೊಂದೆಡೆ ಕೆಲವರು ಬೆಳೆ ಹಾನಿ(Crop Lost) ಹಾಗೂ ಕೆಲವು ಅವಾಂತರಗಳಿಂದ ಸಣ್ಣಪುಟ್ಟ ತೊಂದರೆ ಅನುಭವಿಸಿದ್ದಾರೆ.

ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಇದರ ಪರಿಣಾಮ ಹೆಬ್ಬಸೂರು ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಕಳೆದ ಒಂದು ಗಂಟೆಯಿಂದ ಮಳೆ ಮುಂದುವರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಮಳೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮಳೆಯಿಂದ ರೈತರು, ಅಡಿಕೆ, ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಬಿಸಿಲಿನ ಬೇಗೆಯಿಂದ ಬಳಲಿದ್ದ ಭಕ್ತರು ಮಳೆಯನ್ನು ಸಂಭ್ರಮಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…
June 4, 2026
10:30 PM
by: ಮಿರರ್‌ ಡೆಸ್ಕ್
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ
June 4, 2026
9:15 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ
June 3, 2026
1:54 PM
by: ಸಾಯಿಶೇಖರ್ ಕರಿಕಳ
ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ
June 3, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror