Advertisement
MIRROR FOCUS

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

Share

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ ಧಗೆ ದಿನೇ ದಿನೇ ಏರತೊಡಗಿತ್ತು. ಮಳೆಗಾಗಿ(Rain) ಎಲ್ಲರೂ ವರುಣ ದೇವರನ್ನು ಪ್ರಾರ್ಥಿಸುವಂತಾಗಿತ್ತು. ಆದರೆ ಈಗ ರಾಜ್ಯದ ಚಾಮರಾಜನಗರ(Chamarajanagara), ಮಂಗಳೂರು(Mangaluru), ಹಾಸನ (Hassan), ಹಾವೇರಿ(Haveri) ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಪರಿಣಾಮದಿಂದ ರೈತರು(Farmer) ಒಂದೆಡೆ ಸಂಭ್ರಮ ಪಟ್ಟರೆ ಇನ್ನೊಂದೆಡೆ ಕೆಲವರು ಬೆಳೆ ಹಾನಿ(Crop Lost) ಹಾಗೂ ಕೆಲವು ಅವಾಂತರಗಳಿಂದ ಸಣ್ಣಪುಟ್ಟ ತೊಂದರೆ ಅನುಭವಿಸಿದ್ದಾರೆ.

ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಇದರ ಪರಿಣಾಮ ಹೆಬ್ಬಸೂರು ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಕಳೆದ ಒಂದು ಗಂಟೆಯಿಂದ ಮಳೆ ಮುಂದುವರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಮಳೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮಳೆಯಿಂದ ರೈತರು, ಅಡಿಕೆ, ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಬಿಸಿಲಿನ ಬೇಗೆಯಿಂದ ಬಳಲಿದ್ದ ಭಕ್ತರು ಮಳೆಯನ್ನು ಸಂಭ್ರಮಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

57 minutes ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

1 hour ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago