Advertisement
MIRROR FOCUS

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

Share

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ ಧಗೆ ದಿನೇ ದಿನೇ ಏರತೊಡಗಿತ್ತು. ಮಳೆಗಾಗಿ(Rain) ಎಲ್ಲರೂ ವರುಣ ದೇವರನ್ನು ಪ್ರಾರ್ಥಿಸುವಂತಾಗಿತ್ತು. ಆದರೆ ಈಗ ರಾಜ್ಯದ ಚಾಮರಾಜನಗರ(Chamarajanagara), ಮಂಗಳೂರು(Mangaluru), ಹಾಸನ (Hassan), ಹಾವೇರಿ(Haveri) ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಯ ಪರಿಣಾಮದಿಂದ ರೈತರು(Farmer) ಒಂದೆಡೆ ಸಂಭ್ರಮ ಪಟ್ಟರೆ ಇನ್ನೊಂದೆಡೆ ಕೆಲವರು ಬೆಳೆ ಹಾನಿ(Crop Lost) ಹಾಗೂ ಕೆಲವು ಅವಾಂತರಗಳಿಂದ ಸಣ್ಣಪುಟ್ಟ ತೊಂದರೆ ಅನುಭವಿಸಿದ್ದಾರೆ.

ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಇದರ ಪರಿಣಾಮ ಹೆಬ್ಬಸೂರು ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಕಳೆದ ಒಂದು ಗಂಟೆಯಿಂದ ಮಳೆ ಮುಂದುವರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಮಳೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.

ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಮಳೆಯಿಂದ ರೈತರು, ಅಡಿಕೆ, ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಬಿಸಿಲಿನ ಬೇಗೆಯಿಂದ ಬಳಲಿದ್ದ ಭಕ್ತರು ಮಳೆಯನ್ನು ಸಂಭ್ರಮಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

17 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

17 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago