ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಮಂಗಳವಾರ ಒಮ್ಮೆಲೇ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಬೀಳುವ ಕಲ್ಲಾಜೆ ಪ್ರದೇಶದಲ್ಲಿ 94 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಭಾರೀ ಮಳೆಯ ಕಾರಣದಿಂದ ಹೊಳೆ-ನದಿಗಳು ತುಂಬಿ ಹರಿಯುತ್ತಿದ್ದು ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿತು.
ಮಲೆನಾಡು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಹಾಗೂ ಮುಂಗಾರು ಮಳೆಯ ಪ್ರಭಾವ ಸೇರಿ ಮಲೆನಾಡು ಮಳೆ ನಾಡಾಗಿ ಮಂಗಳವಾರ ಕಂಡಿತು. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಮಳೆ ಪ್ರಭಾವ ಹೆಚ್ಚಾಗಿತ್ತು, ಘಟ್ಟ ಪ್ರದೇಶದಲ್ಲೂ ಮಳೆ ಸುರಿದ ಕಾರಣ ದರ್ಪಣ ತೀರ್ಥ ನದಿಯಲ್ಲಿ ಹೆಚ್ಚಿನ ನೀರು ಕಂಡುಬಂದಿತ್ತು. ಉಳಿದಂತೆ ಕುಮಾರಧಾರಾ ಸೇರಿದಂತೆ ದಕ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯಿತು. ಮಳೆಯ ಅಬ್ಬರಕ್ಕೆ ಕೃಷಿಕರಿಗೆ ಭಯ ಶುರುವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ವಾಯುಭಾರ ಕುಸಿತದ ಕಾರಣದಿಂದ ಸೆ.10 ರವರೆಗೆ ಇದೇ ರೀತಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇತ್ತು. ಆದರೆ ಸದ್ಯದ ಮಾಹಿತಿಯಂತೆ ಮೋಡಗಳು ಚದುರಲು ಪ್ರಾರಂಭವಾಗಿದ್ದು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…