ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಮಂಗಳವಾರ ಒಮ್ಮೆಲೇ ಭಾರೀ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಬೀಳುವ ಕಲ್ಲಾಜೆ ಪ್ರದೇಶದಲ್ಲಿ 94 ಮಿಮೀ ಗಿಂತಲೂ ಅಧಿಕ ಮಳೆ ಸುರಿದಿದೆ. ಭಾರೀ ಮಳೆಯ ಕಾರಣದಿಂದ ಹೊಳೆ-ನದಿಗಳು ತುಂಬಿ ಹರಿಯುತ್ತಿದ್ದು ಗ್ರಾಮೀಣ ಭಾಗದ ಜನಜೀವನ ಅಸ್ತವ್ಯಸ್ತಗೊಂಡಿತು.
ಮಲೆನಾಡು ಭಾಗಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ವಾಯುಭಾರ ಕುಸಿತದ ಪ್ರಭಾವ ಹಾಗೂ ಮುಂಗಾರು ಮಳೆಯ ಪ್ರಭಾವ ಸೇರಿ ಮಲೆನಾಡು ಮಳೆ ನಾಡಾಗಿ ಮಂಗಳವಾರ ಕಂಡಿತು. ಕುಕ್ಕೆ ಸುಬ್ರಹ್ಮಣ್ಯದಲ್ಲೂ ಮಳೆ ಪ್ರಭಾವ ಹೆಚ್ಚಾಗಿತ್ತು, ಘಟ್ಟ ಪ್ರದೇಶದಲ್ಲೂ ಮಳೆ ಸುರಿದ ಕಾರಣ ದರ್ಪಣ ತೀರ್ಥ ನದಿಯಲ್ಲಿ ಹೆಚ್ಚಿನ ನೀರು ಕಂಡುಬಂದಿತ್ತು. ಉಳಿದಂತೆ ಕುಮಾರಧಾರಾ ಸೇರಿದಂತೆ ದಕ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯಿತು. ಮಳೆಯ ಅಬ್ಬರಕ್ಕೆ ಕೃಷಿಕರಿಗೆ ಭಯ ಶುರುವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ವಾಯುಭಾರ ಕುಸಿತದ ಕಾರಣದಿಂದ ಸೆ.10 ರವರೆಗೆ ಇದೇ ರೀತಿ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇತ್ತು. ಆದರೆ ಸದ್ಯದ ಮಾಹಿತಿಯಂತೆ ಮೋಡಗಳು ಚದುರಲು ಪ್ರಾರಂಭವಾಗಿದ್ದು ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…